8:46 PM Saturday25 - April 2026
ಬ್ರೇಕಿಂಗ್ ನ್ಯೂಸ್
ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ…

ಇತ್ತೀಚಿನ ಸುದ್ದಿ

ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಶಂಭೂರು ಎಂಆರ್ ಎಫ್ ಘಟಕಕ್ಕೆ ಭೇಟಿ

22/09/2025, 14:16

ಬಂಟ್ವಾಳ(reporterkarnataka.com): ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗದೆ ನೂರಾರು ವರ್ಷಗಳು ಹಾಗೆಯೇ ಉಳಿಯುವುದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತಿದೆ. ಅದನ್ನು ಪರಿಹರಿಸಲು ಪ್ಲಾಸ್ಟಿಕ್ , ಬಟ್ಟೆ ಮುಂತಾದ ಅಜೈವಿಕ ವಸ್ತುಗಳನ್ನು ಬೇರ್ಪಡಿಸಿ ವಿವಿಧ ಮರುಬಳಕೆ ಉತ್ಪನ್ನಗಳ ತಯಾರಿಗಾಗಿ ಅದನ್ನು ಕಳುಹಿಸಿಕೊಡಲು ಇಂತಹ ತ್ಯಾಜ್ಯ ನಿರ್ವಹಣಾ ಘಟಕಗಳು ಕೆಲಸ ಮಾಡುತ್ತಿವೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಹೇಳಿದರು.

ಅವರು ಶಂಭೂರು ತ್ಯಾಜ್ಯ ಘಟಕಕ್ಕೆ ಭೇಟಿ ನೀಡಿದ ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತ್ಯಾಜ್ಯ ನಿರ್ವಹಣೆಯ ಬಗೆಗೆ ಮಾಹಿತಿ ನೀಡಿದರು.
ನಿರ್ವಹಣಾ ಘಟಕದ ಮೇಲ್ವಿಚಾರಕ ನವನೀತ್ ರವರು ಘಟಕದ ಚಟುವಟಿಕೆಗಳನ್ನು ವಿವರಿಸಿ ಪ್ಲಾಸ್ಟಿಕ್ ನ ಸೂಕ್ಷ್ಮ ಕಣಗಳು ಸಸ್ಯ, ಪ್ರಾಣಿ, ಮೀನಿನ ಮೂಲಕ ನಮ್ಮ ದೇಹ ಸೇರಿ ಕ್ಯಾನ್ಸರ್ ಉಂಟು ಮಾಡಬಲ್ಲದು ಎಂದರು.


ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್, ಅಭಿವೃದ್ಧಿ ಅಧಿಕಾರಿ ಹರೀಶ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ವಿದ್ಯಾ ಪುಷ್ಪರಾಜ್ ಮತ್ತು ಸದಸ್ಯರು, ಶಾಲಾ ಪೋಷಕರು,ಪಂಚಾಯತ್ ಸಿಬ್ಬಂದಿಗಳು, ಮುಖ್ಯ ಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ, ಶಿಕ್ಷಕರಾದ ಹರಿಪ್ರಸಾದ್, ಭಾರತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪರಿಸರದಲ್ಲಿ ಗಿಡ ನಾಟಿ ಮಾಡಲಾಯಿತು. ಭೇಟಿ ನೀಡಿದ ವಿದ್ಯಾರ್ಥಿಗಳಿಗೆ ನರಿಕೊಂಬು ಗ್ರಾಮ ಪಂಚಾಯತ್ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು