9:51 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

Mangaluru | ನಾಲ್ಕನೇ ವರ್ಷದ ಕುಡ್ಲದ ಪಿಲಿಪರ್ಬ-2025ರ ಚಪ್ಪರ ಮುಹೂರ್ತ

22/09/2025, 20:09

ಮಂಗಳೂರು(reporterkarnataka.com):ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ “ಕುಡ್ಲದ ಪಿಲಿ ಪರ್ಬ-2025” ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ನಡೆಯಿತು.


ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು “ದಸರಾ ಸಂದರ್ಭದಲ್ಲಿ ಇಡೀ ತುಳುನಾಡಿನಲ್ಲೇ ಹುಲಿವೇಷದ ಸಂಭ್ರಮ ಮನೆ ಮಾಡಿರುತ್ತದೆ. ಇಂದು ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಸಪ್ಟೆಂಬರ್ 30ರ ಮಂಗಳವಾರದಂದು ನಡೆಯಲಿರುವ ನಾಲ್ಕನೇ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು. ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ನರೇಶ್ ಪ್ರಭು, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರುಗಳು, ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು