11:21 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ, ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ: ಸಿದ್ದರಾಮಯ್ಯ ವ್ಯಂಗ್ಯ

22/09/2025, 21:20

ಮೈಸೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ. ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.
ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದರು.
ಎಂಟು ವರ್ಷ ವಿಪರೀತ GST ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.
GST 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.
ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ನುಡಿದರು.

*ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದು: ಸಿಎಂ:*
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, "ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು" ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ , ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.
ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹಸರಲ್ಲೇ ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು