10:28 PM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್: ವಿದ್ಯಾರ್ಥಿ ವೇತನ, ಅಸಹಾಯಕರಿಗೆ ಧನ ಸಹಾಯ ವಿತರಣೆ

22/09/2025, 22:27

ಮಂಗಳೂರು(reporterkarnataka.com): ನಗರದ ಪಡೀಲ್ ನಲ್ಲಿ ಇತ್ತೀಚೆಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ ಮೂಲಕವಾಗಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಪಡೀಲ್ ಇದರ ಸಹಯೋಗದೊಂದಿಗೆ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಆಶಕ್ತರಿಗೆ, ಅಸಹಾಯಕರಿಗೆ ಧನ ಸಹಾಯವನ್ನು ವಿತರಿಸಲಾಯಿತು.
ಟ್ರಸ್ಟ್ ನ ಗೌರವಾಧ್ಯಕ್ಷರಾದ ವಾಮನ್ ಕುದ್ರೋಳಿ ಮಾತನಾಡಿ, ಟ್ರಸ್ಟ್ ತನ್ನ ಸೇವಾಕಾರ್ಯಗಳನ್ನು ಕಳೆದ 23 ವರುಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ವಿದ್ಯಾರ್ಥಿ ವೇತನ, ಆಶಕ್ತರಿಗೆ ಸಹಾಯ ಹಸ್ತ, ಆರೋಗ್ಯ ಶಿಬಿರ, ಕನ್ನಡಕ ವಿತರಣೆ ಪ್ರಮುಖವಾಗಿವೆ, ಜೊತೆಗೆ ಮಾಹಿತಿ ಆಧಾರಿತ ಮಾಧ್ಯಮವಾಗಿ ಆತ್ಮಶಕ್ತಿ ಪತ್ರಿಕೆಯನ್ನು ಹೊರತರಲಾಗುತ್ತಿದೆ, ಈ ಕಾರ್ಯಕ್ರವನ್ನು ನಡೆಸುವುದರಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಇದರ ಪಾತ್ರವೂ ಉಲ್ಲೇಖನೀಯವೆಂದರು,ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರೂ, ಟ್ರಸ್ಟ್ ನ ಕಾರ್ಯಧ್ಯಕ್ಷರೂ ಆದ ಸಹಕಾರ ರತ್ನ ಚಿತ್ತಾರಂಜನ್ ಬೋಳಾರ್ ಮಾತನಾಡುತ್ತಾ ಇಂತಹ ಸೇವಾ ಕಾರ್ಯಗಳಲ್ಲೂ ಸಂಘ ತನ್ನ ಹಸ್ತವನ್ನು ದೀರ್ಘವಾಗಿಸಿ ಟ್ರಸ್ಟ್ ನ ಈ ಎಲ್ಲಾ ಸಮಾಜ ಮುಖಿ ಚಟುವಟಿಕೆಗಳಲ್ಲಿ ತನ್ನನ್ನು ಜೊತೆಯಾಗಿಸಿಕೊಂಡಿದೆಯೆಂದರು, ಟ್ರಸ್ಟ್ ಅಧ್ಯಕ್ಷ ಗೋಪಾಲ್ ಪೂಜಾರಿ ಮಾತನಾಡುತ್ತಾ ಸಮಾಜದ ಸೇವೆ ಅದು ದೇವರ ಕೆಲಸ, ಸಮಾಜದ ಬಗ್ಗೆ ನಮಗೆ ಸದಾ ತುಡಿತ ಇರುವುದು ಅವಶ್ಯಕ ನಮಗೆಲ್ಲಾ ಸಮಾಜದ ಋಣ ವಿದೆಯೆಂದರು.
ವೇದಿಕೆಯಲ್ಲಿ ಟ್ರಸ್ಟ್ ನ ಉಪಾಧ್ಯಕ್ಷರಾದ ಮುದ್ದು ಮೂಡುಬೆಳ್ಳೆ, ಕೋಶಾಧಿಕಾರಿ ಬಾಬು ಎಸ್‌. ಕರ್ಕೇರ, ಟ್ರಸ್ಟಿಗಳಾದ ಜಯಚಂದ್ರ ಕಜೆಕಾರ್, ಸದಾನಂದ ಸುವರ್ಣ, ಚಂದ್ರಾವತಿ, ಟ್ರಸ್ಟಿ ಹಾಗೂ ಸಹಕಾರಿ ಸಂಘದ
ಉಪಾಧ್ಯಕ್ಷರಾದ, ನೇಮಿರಾಜ್ ಪಿ, ಸೀತಾರಾಮ್, ಆನಂದ್ ಕೊಂಡಾಣ, ಬಿ. ಪಿ ದಿವಾಕರ್,ರಮಾನಾಥ್ ಸನಿಲ್, ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯಾ ವಿಜಯ್ ಮುಂತಾದವರು ಉಪಸ್ಥಿತರಿದ್ದರು.
ಟ್ರಸ್ಟ್ ಕಾರ್ಯದರ್ಶಿ ಗೋಪಾಲ್ ಎಂ. ಫಲಾನುಭವಿಗಳ ಪಟ್ಟಿ ವಾಚಿಸಿದರು. ಜೊತೆ ಕಾರ್ಯದರ್ಶಿ ವಿಶ್ವನಾಥ್ ಪೂಜಾರಿ ರೆಂಜಾಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು