11:34 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ ಪಾರು

23/09/2025, 12:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ವಿರಾಜಪೇಟೆ ಗೋಣಿಕೊಪ್ಪಲು ಮುಖ್ಯ ರಸ್ತೆಯ ಬಿಟ್ಟಂಗಾಲದ, ಬಿ ಶೆಟ್ಟಿಗೇರಿಗೆ ಹೋಗುವ ಮಾರ್ಗದ ಮುಂಭಾಗದ ತಿರುವಿನಲ್ಲಿ ಇಂದು ಬೆಳಗ್ಗೆ ವಿರಾಜಪೇಟೆ ಯಿಂದ ಬರುತ್ತಿದ್ದ ಅಣ್ಣಪ್ಪಸ್ವಾಮಿ ಬಸ್ಸಿಗೆ, ಮೈಸೂರಿನಿಂದ ಕೋಳಿ ತುಂಬಿಕೊಂಡು ಬರುತ್ತಿದ್ದ ಪಿಕ್ ಅಪ್ ಜೀಪ್ ಡಿಕ್ಕಿಯಾಗಿ, ಜೀಪ್ ಒಂದು ಬದಿ ರಸ್ತೆಯ ಪಕ್ಕಕ್ಕೆ ವಾಲಿ, ಸಂಪೂರ್ಣ ಜಖಂಗೊಂಡಿದೆ.

ಜೀಪಿನಲ್ಲಿದ್ದ ಚಾಲಕ ಹಾಗೂ ಮತೊಬ್ಬನಿಗೆ ಯಾವುದೇ ರೀತಿಯ ಗಾಯಗಳು ಉಂಟಾಗಿಲ್ಲ. ಜೀಪ್ ನ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎಂದು ಪ್ರತಿಕ್ಷ ದರ್ಶಿಗಳು ಹೇಳಿದ್ದಾರೆ.
ಮೈಸೂರಿನಿಂದ ಕೋಳಿ ತುಂಬಿಕೊಂಡು, ಕೊಡಗು ಹಾಗೂ ಕೇರಳಕ್ಕೆ ಈ ಮಾರ್ಗದಲ್ಲಿ ನೂರಾರು ಪಿಕಪ್ ಜೀಪುಗಳು ಪ್ರತಿನಿತ್ಯ ಸಂಚರಿಸುತ್ತಿದ್ದು, ಬಹಳಷ್ಟು ವಾಹನಗಳು ಅತಿ ವೇಗದಿಂದ ಹಾಗೂ ಅಜಾಗೂರಕ ಚಾಲನೆಯಿಂದ ಹಲವು ಅಪಘಾತಗಳು ಆಗಾಗ ಸಂಭವಿಸುತ್ತದೆ. ಪೊಲೀಸ್ ಇಲಾಖೆ ಕೋಳಿ ತುಂಬಿದ ವಾಹನಗಳ ವೇಗದ ಚಾಲನೆಗೆ ಮಿತಿಗೊಳಿಸಬೇಕಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು