7:14 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

ಮಾಜಿ ಡಿವೈಎಸ್ಪಿ ದಿವಂಗತ ಗಣಪತಿ ಆರೋಪ: ಕೇಶವನಾರಾಯಣ ಆಯೋಗ ವರದಿ ತಿರಸ್ಕಾರ

25/09/2025, 20:13

ಬೆಂಗಳೂರು(reporterkarnataka.com): ಹಿಂದಿನ ಗೃಹಸಚಿವರಾದ ಕೆ.ಜೆ.ಜಾರ್ಜ್‌ ಹಾಗೂ ಐ.ಪಿ.ಎಸ್‌.ಎ.ಎಮ್‌. ಪ್ರಸಾದ ಹಾಗೂ ಐ.ಪಿ.ಎಸ್‌ ಪ್ರಣವ ಮೊಹಾಂತಿ ಅವರ ವಿರುದ್ಧ ದಿ.ಗಣಪತಿಯವರು ಸಂದರ್ಶನದಲ್ಲಿ ಆರೋಪಿಸಿರುವುದನ್ನು ಕೇಶವನಾರಾಯಣ ಆಯೋಗದ ವರದಿ ತಳ್ಳಿಹಾಕಿದೆ.
ಎಮ್‌.ಕೆ.ಗಣಪತಿಯವರ ಆತ್ಮಹತ್ಯೆಗೆ ಇವರುಗಳು ಕಾರಣವಲ್ಲವೆಂಬ ಅಭಿಪ್ರಾಯವನ್ನು ಕೇಶವನಾರಾಯಣ ಆಯೋಗವು ಸ್ಪಷ್ಟವಾಗಿ ಹೇಳಿದ್ದು, ತನಿಖಾ ಪ್ರಕರಣದಲ್ಲಿ ಕೆಲವು ನ್ಯೂನ್ಯತೆಗಳು ಕಂಡುಬಂದಿರುವುದರಿಂದ ಕೆಲವು ಅಧಿಕಾರಿ/ಸಿಬ್ಬಂದಿಯವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮಾಡಿರುವ ಶಿಫಾರಸ್ಸನ್ನು ರಾಜ್ಯ ಸಚಿವ ಸಂಪುಟ ತಿರಸ್ಕರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ ಇಂದಿಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರಿಗೆ ಸಚಿವ ಸಂಪುಟದ ನಿರ್ಣಯಗಳ ವಿವರಗಳನ್ನು ನೀಡಿದ ಅವರು ಶ್ರೀ ಎಂ.ಕೆ ಶ್ರೀವಾಸ್ತವ್‌, ಐಪಿಎಸ್‌ ನಿವೃತ್ತ ಪೊಲೀಸ್‌ ಮಹಾನಿರ್ದೇಶಕರು ಇವರು ಸರ್ಕಾರಕ್ಕೆ ಸಲ್ಲಿಸಿರುವ ಅಧ್ಯಯನ ವರದಿಯಲ್ಲಿ ತನಿಖಾ ಕ್ರಮಗಳ ಬಗ್ಗೆ ವಿಚಾರಣಾ ಆಯೋಗವು ಮಾಡಿರುವ ಆಕ್ಷೇಪಣೆಗಳನ್ನು ಸಿ.ಬಿ.ಐ ಸಲ್ಲಿಸಿರುವ ವರದಿಯನ್ನು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯವು ಮಾನ್ಯ ಮಾಡಿರುವುದರಿಂದ ಮತ್ತು ಮಾನ್ಯ ಸರ್ವೋಚ್ಛ ನ್ಯಾಯಾಲಯವು ಎಸ್‌.ಎಲ್‌.ಪಿ ಯಲ್ಲಿ ಸಿ.ಬಿ.ಐ ಪ್ರಕರಣವನ್ನು ಮುಕ್ತಾಯ ಮಾಡಿರುವುದನ್ನು ಎತ್ತಿ ಹಿಡಿದಿರುವುದರಿಂದ, ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆಯ ಶಿಫಾರಸ್ಸನ್ನು ಒಪ್ಪುವ ಅಗತ್ಯವಿಲ್ಲವೆಂದು ಅಧ್ಯಯನ ವರದಿಯಲ್ಲಿ ತಿಳಿಸಲಾಗಿರುತ್ತದೆ.
ಕೆ.ಎನ್‌. ಕೇಶವನಾರಾಯಣ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಇವರ ವಿಚಾರಣಾ ವರದಿಯನ್ನು ಸಚಿವ ಸಂಪುಟವು ಭಾಗಶ: ಒಪ್ಪಿ, ಅಧಿಕಾರಿಗಳ ವಿರುದ್ಧದ ಇಲಾಖಾ ತನಿಖೆಯ ಶಿಫಾರಸ್ಸನು ತಿರಸ್ಕರಿಸಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು