3:51 AM Thursday10 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಲಾಕ್ ಡೌನ್ ನಿಯಮ ಪಾಲಿಸಿ ಊರಿನವರಿಂದಲೇ ಶಾಲೆ ಕಟ್ಟಡ ದುರಸ್ತಿ; ದ.ಕ. ಜಿಲ್ಲೆಯಲ್ಲೇ ಅಪರೂಪದ ಘಟನೆ !!

23/05/2021, 11:52

ಅನುಷ್ ಪಂಡಿತ್ ಮಂಗಳೂರು

Info.reporterkarnataka@gmail.com

ದೇಶದಾದ್ಯಂತ ಕೊರೊನಾ ತಂದ ಸಂಕಷ್ಟ ಅಷ್ಟಿಷ್ಟಲ್ಲ… ಜನರು  ಕೊರೊನಾ ಅಲೆಗೆ ತತ್ತರಿಸಿ ಹೋಗಿದ್ದಾರೆ. ಉದ್ಯೋಗಸ್ಥ ಲಾಕ್ ಡೌನ್ ನಿಂದ ಮನೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಶಾಲಾ ಕಾಲೇಜು ಮಕ್ಕಳು ಆನ್ಲೈನ್ ಶಿಕ್ಷಣದ ಮೊರೆ ಹೋಗಿರುವುದು ಅನಿವಾರ್ಯ. ಅದರಂತೆ ಎಲ್ಲವೂ ಯಥಾಸ್ಥಿತಿ ತಲುಪಿದ ಮೇಲೆ ಶಾಲೆ ತೆರೆಯಬೇಕು. ಮಕ್ಕಳು ಕಲಿತು ದೇಶದ ಉಜ್ವಲ ಭವಿಷ್ಯ ರೂಪಿಸಬೇಕು. 


ಇದಕ್ಕೆ ಪುಷ್ಟಿ ಕೊಡುವಂತೆ ದ. ಕ ಜಿಲ್ಲೆ ಯ ಪುತ್ತೂರು ತಾಲೂಕಿನ ಕುಂಜೂರು ಪಂಜ ಶಾಲೆ ಮಾದರಿಯಾಗಿದೆ.


ಊರಿನ ಕೆಲ ನಾಗರಿಕರು ಹಾಗೂ ಶಾಲೆಯ ಹಳೆಯ ವಿದ್ಯಾಥಿಗಳು ಇಂತಹದೊಂದು ಕಾರ್ಯಕ್ಕೆ ಮುಂದಾಗಿದ್ದಾರೆ ಎಂದರೆ ತಪ್ಪಾಗಲಾರದು. ಅದೇನೆಂದರೆ ಲಾಕ್ಡೌನ್ ನಲ್ಲಿ ಮನೆಯಲ್ಲಿ ಕುಳಿತು ಕಾಲ ಹರಣ ಮಾಡುವ ಬದಲು ಕೋವಿಡ್ ನಿಯಮ ಪಾಲಿಸಿ ಮಾಸ್ಕ್ ಧರಿಸಿ ಫೀಲ್ಡಿಗಿಳಿದಿದ್ದಾರೆ.


ಇಲ್ಲಿನ 70 ವರ್ಷ ಹಳೆಯದಾದ ಸರಕಾರಿ ಶಾಲೆಯು  ಗಾಳಿ ಮಳೆಗೆ ಸೋರುತ್ತದೆ. ಶಾಲಾ ಕೊಠಡಿಯಲೊಳಗೆ ನೀರು ಸೋರುತ್ತದೆ. ಇದನ್ನು ಮನಗಂಡ ಶಿಕ್ಷಣ ಪ್ರೇಮಿಗಳು ಮಕ್ಕಳ ಮುಂದಿನ ಕಲಿಕೆ ಅವಧಿಗೆ ಯಥಾಸ್ಥಿತಿಗೆ ತರಲು ಆಡಳಿತ ಮಂಡಳಿ ಹಾಗೂ ಹಳೆಯ ವಿದ್ಯಾಥಿಗಳು, ಊರಿನ ನಾಗರಿಕರೊಂದಿಗೆ ಸೇರಿಕೊಂಡು, ಊರ ನಾಗರೀಕರ, ಹಳೆ ವಿದ್ಯಾರ್ಥಿಗಳ ದೇಣಿಗೆ ಹಣದಲ್ಲಿ ದುರಸ್ತಿ ಕಾರ್ಯಾದಲ್ಲಿ ತೊಡಗಿದ್ದಾರೆ. ನಾವು ಕಲಿತ ಶಾಲೆ ಅಭಿಮಾನ ಮರೆಯದೆ ಮುಂದಿನ ಪೀಳಿಗೆ ಒಳ್ಳೆಯ ಶಿಕ್ಷಣ ಪಡೆಯಬೇಕೆಂಬ ದೃಷ್ಟಿಯಿಂದ ಇಂತಹ ಮಹತ್ವದ ಕಾರ್ಯದಲ್ಲಿ ತೊಡಗಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯಾಗಿದೆ.
ಇಂತಹ ಕಾರ್ಯಕ್ಕೆ ಜನಪ್ರತಿನಿಧಿಗಳು, ಸಹಾಯ ಹಸ್ತ ನೀಡಲಿ ಎನ್ನುವುದು ಆಶಯ.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಅನುದಾನ ನೀಡುವ ಭರವಸೆ ನೀಡಿದೆ. ಹಾಗೂ ಕರ್ನಾಟಕ ಬ್ಯಾಂಕ್ ತನ್ನ ಸಿ ಎಸ್ ಆರ್ ಯೋಜನೆಯಡಿ ಅನುದಾನ ಕೊಡುತ್ತೇವೆ ಎಂದು ಹೇಳಿದ್ದಾರೆ. ಶಾಸಕರು ಕೂಡ ಭರವಸೆ ನೀಡಿದ್ದಾರೆ ಆದರೆ ಯಾವುದೇ ಅನುದಾನ ಸರಕಾರ ದಿಂದ ಈವರೆಗೆ ಬಂದಿಲ್ಲ.

ಲೋಕೇಶ್ ಬಲ್ಯಾಯ,ಹಳೆ ವಿದ್ಯಾರ್ಥಿ ದೊಡ್ಡಡ್ಕ

ಇತ್ತೀಚಿನ ಸುದ್ದಿ

ಜಾಹೀರಾತು