2:39 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ದಸರಾ: ಜನದಟ್ಟನೆ ತಡೆಯಲು ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು ಓಡಾಟ

26/09/2025, 20:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ಟ್ರಿಪ್ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.
ಯಶವಂತಪುರ ಮತ್ತು ಮಂಗಳೂರು ನಡುವೆ ವಿಶೇಷ ರೈಲು ಸಂಖ್ಯೆ 06257/ 06258 ಸೆ. 30ರಂದು ಯಶವಂತಪುರದಿಂದ ರಾತ್ರಿ 11.55ಕ್ಕೆ ಹೊರಡಲಿದ್ದು, ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಅ. 1ರಂದು 2.35ಕ್ಕೆ ಮಂಗಳೂರಿನಿಂದ ಹೊರಟು ರಾತ್ರಿ 11.30ಕ್ಕೆ ಯಶವಂತಪುರ ತಲುಪಲಿದೆ ಎಂದು ರೈಲ್ವೇ ಪ್ರಕಟನೆ ತಿಳಿಸಿದೆ. ಸೆ. .26ರಂದು ಮತ್ತು ಸೆ.28ರಂದು ಎಸ್‌ಎಂವಿಬಿಯಿಂದ ಸಂಜೆ 7 ಗಂಟೆಗೆ ಹೊರಡಲಿರುವ ರೈಲು ಮರುದಿನ ಬೆಳಗ್ಗೆ 4.15ಕ್ಕೆ ಹೊಸಪೇಟೆ ತಲುಪಲಿದೆ. ಹೊಸಪೇಟಿಯಿಂದ ಸೆ.27 ಮತ್ತು ಸೆ.29ರಂದು ರಾತ್ರಿ 8.45ಕ್ಕೆ ಹೊರಡಲಿರುವ ರೈಲು ಬೆಳಗ್ಗೆ 8.10ಕ್ಕೆ ಎಸ್‌ಎಂವಿಬಿ ತಲುಪಲಿದೆ.
22 ಗಂಟೆಗಳಲ್ಲಿ ಸ್ಲೀಪರ್ ಕೋಚ್ ಬುಕ್!
ಬೆಂಗಳೂರು – ಮಂಗಳೂರು ನಡುವಿನ ದಸರಾ ವಿಶೇಷ ರೈಲಿಗೆ ರೈಲು ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದೆ. 22 ಗಂಟೆಗಳಲ್ಲಿ ಸ್ಲೀಪರ್ ಕೋಚ್‌ನ ಎಲ್ಲಾ ಸೀಟುಗಳು ಬುಕ್ ಆಗಿದೆ. ಹಬ್ಬದ ಸಮಯದಲ್ಲಿ ಬೆಂಗಳೂರು ಮತ್ತು ಮಂಗಳೂರು ವಿಶೇಷ ರೈಲಿನ ಅಗತ್ಯವಿರುವುದು ಸಾಬೀತಾಗಿದೆ ಎಂದು ರೈಲು ಬಳಕೆದಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು