10:21 AM Thursday2 - October 2025
ಬ್ರೇಕಿಂಗ್ ನ್ಯೂಸ್
Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ… ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತನಿಖಾ ವರದಿಗೆ ಬಿ ರಿಪೋರ್ಟ್ ಕಾಂಗ್ರೆಸ್‌ ಸರ್ಕಾರ 80 ಪರ್ಸೆಂಟ್‌ ಕಮಿಶನ್‌ ಪಡೆಯುತ್ತಿದೆ, ಸಿಎಂ ರಾಜೀನಾಮೆ ನೀಡಲಿ: ಪ್ರತಿಪಕ್ಷ… ಮಡಿಕೇರಿ ಸಾರಿಗೆ ಬಸ್‌ ಡಿಪೋ ಎದುರು ನಿರ್ಮಿಸಲಾದ ಅನಧಿಕೃತ ಶೆಡ್‌ ತೆರವಿಗೆ ನಗರಸಭೆ… ಶಿಕ್ಷಣ ವ್ಯಕ್ತಿಯನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯಲಿದೆ: ಸೈಂಟ್ ಜೋಸೆಫ್ ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲರು

ಇತ್ತೀಚಿನ ಸುದ್ದಿ

ನಾಡಹಬ್ಬ ಮೈಸೂರು ದಸರಾ: ಚಿನ್ನದ ಅಂಬಾರಿಯಲ್ಲಿ ಚಾಮುಂಡಿ ತಾಯಿ ಜಂಬೂ ಸವಾರಿಗೆ ಕ್ಷಣಗಣನೆ

02/10/2025, 09:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಚಿನ್ನದ ಅಂಬಾರಿಯಲ್ಲಿ ನಾಡಿನ ಆದಿ ದೇವತೆ ಚಾಮುಂಡೇಶ್ವರಿ ದೇವಿ ಯನ್ನು ಹೊತ್ತು ಸಾಗುವ ಜಂಬೂ ಸವಾರಿಗೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ.
ಈ ಬಾರಿಯ ವಿಜಯದಶಮಿ ಜಂಬೂಸವಾರಿ ಅಭಿಮನ್ಯು ನೇತೃತ್ವದ ದಸರಾ ಗಜಪಡೆ, ಅಶ್ವಾರೋಹಿದಳ ಭಾಗಿಯಾಗಲಿವೆ.ಅಂಬಾರಿ ಆನೆ ಅಭಿಮನ್ಯುವಿಗೆ ಎಡಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ, ರೂಪ ಸಾಥ್ ನೀಡಲಿದೆ.ನಿಶಾನೆ ಆನೆಯಾಗಿ ಧನಂಜಯ, ನೌಫತ್ ಆನೆಯಾಗಿ ಗೋಪಿ ಭಾಗಿಯಾಗಲಿದೆ. ಸಾಲಾನೆಗಳಾಗಿ ಮಹೇಂದ್ರ, ಶ್ರೀಕಂಠ, ಲಕ್ಷ್ಮಿ, ಕಂಜನ್, ಭೀಮ, ಏಕಲವ್ಯ, ಪ್ರಶಾಂತ, ಸುಗ್ರಿವ, ಹೇಮಾವತಿ ಆನೆಗಳು ಜಂಬೂಸವಾರಿ ಮೆರವಣಿಗೆಯ ಭಾಗಿಯಾಗಲಿದೆ, ಅಂಬಾರಿ ಹೊತ್ತು ಸಾಗಲಿರುವ ಪೊಲೀಸ್ ವಾದ್ಯವೃಂದ, ಪೊಲೀಸ್ ಇಲಾಖೆಯ ತುಕಡಿ, ಅರಣ್ಯ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲಾ ಪಂಚಾಯಿತಿಗಳಿಂದ ಸ್ತಬ್ದ ಚಿತ್ರಗಳು, ಕಲಾ ತಂಡಗಳು ಅರಮನೆ ಅವರದಿಂದ ಹೊರಟು, ಬನ್ನಿಮಂಟಪ ದವರೆಗೆ ಮೆರವಣಿಗೆ ಸಾಗಲಿದೆ.
ಬನ್ನಿಮಂಟಪ ಕಾವಾಯತ್ತು ಮೈದಾನದಲ್ಲಿ ಡ್ರೋನ್ ಪ್ರದರ್ಶನ, ಪಂಜಿನ ಪೆರೇಡ್ ನಡೆಯಲಿದ್ದು, ಈಗಾಗಲೇ ಸಾರ್ವಜನಿಕರ ಮನಗೆದ್ದಿರುವ ಡ್ರೋನ್ ಹಾರಾಟ ಗಿನ್ನಿಸ್ ರೆಕಾರ್ಡ್ ಗೆ ಪಾತ್ರವಾಗಿದೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯುವ ಈ ಪ್ರದರ್ಶನ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.
ಸಾವಿರಾರು ಮೈದಾನದಲ್ಲಿ ‌3000 ಡ್ರೋನ್ ಗಳು ಆಗಸದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸುವ ಮೂಲಕ ಎಲ್ಲರನ್ನು ರೋಮಾಂಚನಗೊಳಿಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು