3:19 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ

02/10/2025, 13:54

ಗಿರಿಧರ್ ಕೊಂಪುಳಿರ ಮೈಸೂರು

info.reporterkarnata@gmail.com

ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.

ದಸರಾ ಉದ್ಘಾಟನೆ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂತೋಷದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

ದಸರಾವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷಗಳು ಭವಿಷ್ಯ ನುಡಿದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು , ಬಜೆಟ್ ಮಂಡಿಸಲು ಸಾಧ್ಯವಿಲ್ಲ ವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು