7:40 PM Thursday2 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

ಮೈಸೂರು ದಸರಾ ಜಂಬೂ ಸವಾರಿ: ಸಿಎಂ, ಡಿಸಿಎಂ, ಯದುವೀರ್ ರಿಂದ ತಾಯಿ ಚಾಮುಂಡಿಗೆ ಪುಷ್ಪ ನಮನ

02/10/2025, 19:40

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆ ಅದ್ಧೂರಿಯಾಗಿ ಜರುಗಿತು. ೭೫೦ ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯುವಿನ ಗಾಂಭೀರ್ಯದ ನಡಿಗೆ, ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಂಡು ಪುನೀತರಾದರು.


ಗಾಂಧಿ ಜಯಂತಿ ದಿನದಂದೇ ನಡೆದ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಂಸ್ಕೃತಿ, ಸೌಹಾರ್ದ, ಸರ್ಕಾರದ ಸಾಧನೆ ಹಾಗೂ ಗಾಂಧೀಜಿಯ ಆದರ್ಶಗಳನ್ನು ಸ್ತಬ್ಧಚಿತ್ರಗಳ ಮೂಲಕ ಸಾರಿತು.ಪಟ್ಟದ ಆನೆಯಾಗಿ ಅಭಿಮನ್ಯು ಆರನೇ ಬಾರಿ ಯಶಸ್ವಿಯಾಗಿ ಅಂಬಾರಿ ಹೊರುವ ಮೂಲಕ ಗಾಂಭೀರ್ಯದ ಹೆಜ್ಜೆ ಹಾಕಿದ. ಅಭಿಮನ್ಯುವಿಗೆ ರೂಪ ಹಾಗೂ ಕಾವೇರಿ ಆನೆಗಳು ಕುಮ್ಕಿ ಆನೆಗಳಾಗಿ ಸಹಕರಿಸಿದವು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಜವಂಶಸ್ತ ಯದುವೀರ್‌ ಶ್ರೀಕಂಠದತ್ತ ಒಡೆಯರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹಾದೇವಪ್ಪ ಸೇರಿದ ಹಲವು ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು.

*58 ಸ್ತಬ್ಧಚಿತ್ರಗಳ ವಿಶೇಷತೆ:*
ದಸರಾ ಮೆರವಣಿಗೆಯಲ್ಲಿ ಒಟ್ಟು 58 ಸ್ತಬ್ಧಚಿತ್ರಗಳು ಪಾಲ್ಗೊಂಡವು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ವಿವಿಧ ಯೋಜನೆಗಳ ಮಾಹಿತಿ ಒದಗಿಸಿದವು. ವಿಶೇಷವಾಗಿ ʼಶಕ್ತಿ ಯೋಜನೆʼ ಸ್ತಬ್ಧಚಿತ್ರವು ಎಲ್ಲರ ಗಮನ ಸೆಳೆಯಿತು. ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ಒದಗಿಸುವ ಈ ಯೋಜನೆಯಿಂದ ಸಮಾಜದಲ್ಲಿ ಆಗಿರುವ ಸಕಾರಾತ್ಮಕ ಬದಲಾವಣೆಗಳನ್ನು ಪ್ರತಿಬಿಂಬಿಸಿತು.

*ಮೆರವಣಿಗೆಗೆ ಸಿಎಂ ಚಾಲನೆ:*
ದಸರಾ ಮೆರವಣಿಗೆ ಆರಂಭದಲ್ಲಿ ಕೋಟೆ ಆಂಜನೇಯ ದೇವಾಲಯದ ಬಳಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 1.08ಕ್ಕೆ ಪೂಜೆ ನೆರವೇರಿಸಿದರು. ಮೆರವಣಿಗೆಗೆ ಚಾಲನೆ ದೊರೆಯುತ್ತಿದ್ದಂತೆ ಸಾವಿರಾರು ಕಲಾವಿದರು ತಮ್ಮ ಜಿಲ್ಲೆಗಳ ಸಾಂಸ್ಕೃತಿಕ ವೈಶಿಷ್ಟ್ಯತೆಗಳನ್ನು ಪಡಿಮೂಡಿಸಿದರು. ತಾಳ,ಮೇಳ, ಕಂಸಾಳೆ, ತಮಟೆ, ಡೋಲು ಚಂಡೆಗಳ ಮೂಲಕ ಸಾಂಸ್ಕೃತಿಕ ಕಲರವ ಮೆರವಣಿಗೆಗೆ ಮೆರಗು ನೀಡಿತು.
ಜಂಬೂ ಸವಾರಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪಾಸ್‌ ಹೊಂದಿದವರಿಗೆ ಮಾತ್ರ ಜಂಬೂ ಸವಾರಿ ಮೆರವಣಿಗೆ ವೀಕ್ಷಿಸಲು ಅವಕಾಶ ನೀಡಲಾಯಿತು. ಅರಮನೆ ಆವರಣದ ಹೊರಗೆ ಕಟ್ಟಡ ಹಾಗೂ ಮರಗಳನ್ನು ಏರಿ ಜಂಬೂ ಸವಾರಿ ವೀಕ್ಷಣೆಗೆ ಕಡಿವಾಣ ಹಾಕಲಾಗಿತ್ತು.
ಮಳೆ ಸಿಂಚನವು ಮೆರವಣಿಗೆ ಉತ್ಸಾಹ ಕಡಿಮೆ ಮಾಡಲಿಲ್ಲ. ಸುಮಾರು ಎರಡು ಗಂಟೆಗಳ ಕಾಲ ಸಾಗಿದ ಮೆರವಣಿಗೆಯಲ್ಲಿ ಪೊಲೀಸ್ ಪಡೆ, ಅಶ್ವಾರೋಹಿ ಪಡೆ, ವಿವಿಧ ಕಲಾತಂಡಗಳು ಹಾಗೂ ಸ್ತಬ್ಧಚಿತ್ರಗಳು ಜಂಬೂ ಸವಾರಿ ಮೆರವಣಿಗೆಯ ಕಲರವ ಹೆಚ್ಚಿಸಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು