4:41 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ ಯಾತ್ರೆ

03/10/2025, 14:28

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ಜನೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ಜಿ.ಟಿ. ವೃತ್ತ, ನಗರಸಭೆ ಮುಂಭಾಗ ಹಾಗೂ ಗಾಂಧಿ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಂಡುಬಂದಿದ್ದಾರೆ.


ಕೆಲವು ಮಂಟಪಗಳ ಡಿಜೆ ಸಂಗೀತಕ್ಕೆ ಮಾರುಹೋಗಿ ಕುಣಿದು ಕುಪ್ಪಳಿಸಿದ್ದಾರೆ. ಗಾಂಧಿ ಮೈದಾನದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದ್ದು. ಆಸನಗಳೆಲ್ಲವೂ ಭರ್ತಿಯಾಗಿ ಪ್ರೇಕ್ಷಕರು ಗುಂಪು ಗುಂಪಾಗಿ ನಿಂತುಕೊಂಡೆ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದಾರೆ. ದಶಮಂಟಪಗಳ ಕಡೆಯಿಂದ ಶೋಭಾ ಯಾತ್ರೆ ಆರಂಭಗೊಂಡಿದ್ದು ಪೇಟೆ ರಾಮ ಮಂದಿರ ಮಂಟಪ ಈಗಾಗಲೇ ಚೌಟಿ ಮಾರಿಯಮ್ಮ ದೇಗುಲದ ಮುಂಭಾಗಕ್ಕೆ ಆಗಮಿಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಇಡೀ ನಗರ ಸಿಸಿಟಿವಿಯ ಕಣ್ಗಾವಲಿನಲ್ಲಿದೆ. ಈ ಬಾರಿ ನಗರದಲ್ಲಿ ವಿದ್ಯುತ್ ದೀಪ ಅಲಂಕಾರ ಹೆಚ್ಚಿನ ಶೋಭೆಯನ್ನು ನೀಡಿದೆ. ದಸರಾ ಜನೋತ್ಸವದ ಯಶಸ್ವಿಗಾಗಿ ಸಮಿತಿಯ ಎಲ್ಲ ಪದಾಧಿಕಾರಿಗಳು ಪಾಲ್ಗೊಂಡಿದ್ದು ವರುಣನ ಸಿಂಚನವಿಲ್ಲದೆ, ಮಂಜಿನ ನಗರಿ ಮಡಿಕೇರಿಯಲ್ಲಿ ತಂಪಾದ ಹವೆಯಲ್ಲಿ ಪ್ರೇಕ್ಷಕರು ದಶಮಂಟಪಗಳ ಚಲನವಲನದ ಕಥಾಪ್ರಸಂಗವನ್ನು ವೀಕ್ಷಿಸಿದರು. ಒಟ್ಟಿನಲ್ಲಿ ಮಡಿಕೇರಿ ದಸರಾ ಈ ಬಾರಿಯೂ ಕೂಡ ತನ್ನ ವೈಭವವನ್ನು ಸಾರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು