12:05 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು: ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್ ಗಳ ಉದ್ಘಾಟನೆ

03/10/2025, 20:59

ಬಂಟ್ವಾಳ(reporterkarnataka.com): ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಹಾಗೂ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ೪ನೇ ಬ್ಯಾಚ್, ಬಿ.ಎಸ್ಸಿ ಅನಸ್ತೇಶಿಯಾ ಹಾಗೂ ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್ ಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಪ್ಲೋರೆನ್ಸ್ ನೈಂಟಿಗೆಲ್ ಸಭಾಂಗಣದಲ್ಲಿ ನಡೆಯಿತು.
ಮುಖ್ಯಅತಿಥಿ ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನ ಮಾಜಿ ನಿರ್ದೇಶಕ ರೆ|ಫಾ| ರಿಚ್ಚಾರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ಸೇವೆ ಮಾಡುವುದು ದೇವರು ಕೊಟ್ಟ ಅವಕಾಶವಾಗಿದ್ದು, ದಾದಿಯರ ಕರ್ತವ್ಯ ನಿರ್ವಹಣೆಗೆ ಸಂಬಂಧ ಹಾಗೂ ಸಂವಹನ ಅತಿ ಅಗತ್ಯವಾಗಿದೆ. ರೋಗಿಗಳಿಗೆ ಪ್ರೀತಿಯುತ ಆರೈಕೆಯ ಮಾತುಗಳು ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣುತ್ತದೆ. ಹೀಗಾಗಿ ದಾದಿಯರು ಯಾವತ್ತೂ ಕೂಡ ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಆಸ್ಪತ್ರೆಗೆ ತಾರದೆ ರೋಗಿಗಳ ಜತೆ ಸದಾ ನಗುವಿನೊಂದಿಗೆ ಸೇವೆ ನೀಡಿದಾಗ ನೀವು ಉತ್ತಮ ದಾದಿಯರಾಗುವುದಕ್ಕೆ ಸಾಧ್ಯವಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನ ನಿರ್ದೇಶಕ ರೆ|ಫಾ| ಪಾವೋಸ್ತಿನ್ ಲುಕಾಸ್ ಲೋಬೊ ಮಾತನಾಡಿ, ದಾದಿಯ ಕರ್ತವ್ಯ ನಿರ್ವಹಣೆಯ ಸಂದರ್ಭ ಜ್ಞಾನ, ಕೌಶಲ್ಯ ಹಾಗೂ ಮೌಲ್ಯ ಎಂಬ ಮೂರು ಅಂಶಗಳ ಕುರಿತು ಅರಿತುಕೊಳ್ಳುವುದು ಅಗತ್ಯವಾಗಿದ್ದು, ನಿರಂತರ ಕೆಲಸ ಮಾಡಿದಾಗ ನಮ್ಮ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವುದಕ್ಕೆ ಸಾಧ್ಯವಿದೆ. ಪ್ರತಿಯೊಬ್ಬರು ಕೂಡ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ನಮ್ಮ ಕೆಲಸವನ್ನು ಸರಿಯಾದ ಸಮಯಕ್ಕೆ ನಿರ್ವಹಿಸುವ ಜತೆಗೆ ಸಹಾನುಭೂತಿಯನ್ನೂ ಮೈಗೂಡಿಸಿಕೊಳ್ಳಬೇಕಾಗುತ್ತದೆ. ಅಧ್ಯಯನದಿಂದ ತಪ್ಪಿಸಿಕೊಳ್ಳದೆ ಕರ್ತವ್ಯವನ್ನು ಸೇವಾ ಮನೋಭಾವದಿಂದ ನೋಡಿದಾಗ ಸಮರ್ಥವಾಗಿ ಕೆಲಸ ನಿರ್ವಹಿಸಬಹುದಾಗಿದೆ. ತುಂಬೆಯ ಈ ನರ್ಸಿಂಗ್ ಕಾಲೇಜು ಫಾ| ರಿಚ್ಚಾರ್ಡ್ ಕುವೆಲ್ಲೊ ಅವರು ನಿರ್ದೇಶಕರಾಗಿದ್ದ ವೇಳೆ ಆರಂಭಗೊಂಡಿದೆ ಎನ್ನವುದು ಹೆಮ್ಮೆಯ ವಿಚಾರ ಎಂದರು.
ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಕಿರಣ್ ಶೆಟ್ಟಿ, ನರ್ಸಿಂಗ್ ಕಾಲೇಜು ಉಪಪ್ರಾಂಶುಪಾಲೆ ಪ್ರೊ| ಜಾನೆಟ್ ಸಿಕ್ವೇರಾ ವೇದಿಕೆಯಲ್ಲಿದ್ದರು. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರೆ|ಫಾ| ಡಾ| ಮೈಕಲ್ ಸಾಂತ್ ಮಯೂರ್ ಉಪಸ್ಥಿತರಿದ್ದರು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆ|ಫಾ| ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ ಸ್ವಾಗತಿಸಿದರು. ತುಂಬೆ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಡಾ| ಶಿವಶಂಕರ್ ಎ.ಆರ್. ವಂದಿಸಿದರು. ನಿಶಾ ಸಿಲ್ವಿಯಾ ಲೋಬೊ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು