4:19 AM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ಪ್ರಕರಣ: 3 ಮಂದಿ ವಿರುದ್ಧ ಮೊಕದ್ದಮೆ; ಉಳಿದವರನ್ನು ಪತ್ತೆಹಚ್ಚಲು ಪೊಲೀಸರಿಂದ ಕ್ರಮ

05/10/2025, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ನಡೆಸಿ ಸೊತ್ತುಗಳ ಹಾನಿಪಡಿಸಿದ ಪ್ರಕರಣ ಸಂಬಂಧಿಸಿದಂತೆ ಮೂವರ ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಉಳಿದವರನ್ನು ಪತ್ತೆಹಚ್ಚಲು ಪೊಲೀಸರು ಕ್ರಮಕೈಗೊಂಡಿದ್ದಾರೆ.


ಮಡಿಕೇರಿಯ ದಸರಾ ಕಲಾ ವೇದಿಕೆಯಲ್ಲಿ ಬಹುಮಾನ ವಿತರಣೆ ಸಂದರ್ಭ ಅಸಮಾಧಾನ ವ್ಯಕ್ತಪಡಿಸಿ ವೇದಿಕೆ ಏರಿ “ಮೋಸ.. ಮೋಸ” ಎಂದು ಘೋಷಣೆ ಕೂಗಿ ಅಲ್ಲಿದ್ದ ಪೊಡಿಯಮ್, ಎಲ್.ಇ.ಡಿ, ಧ್ವನಿವರ್ಧಕ, ಲೈಟ್ ಗಳನ್ನು ಹೊಡೆದು ಹಾಕಿ ಹಾಗೆ ಬಹುಮಾನಕ್ಕೆ ಇಟ್ಟ ಚಿನ್ನ ಹಾಗೂ ಬೆಳ್ಳಿಯ ಬಹುಮಾನಗಳನ್ನು ವೇದಿಕೆಯಿಂದ ಕೆಳಗೆ ಬಿಸಾಕಿ, 150 ಕುರ್ಚಿಗಳನ್ನು ಹಾನಿಪಡಿಸಿ ಒಟ್ಟು ಎರಡು ಲಕ್ಷ ರೂಪಾಯಿ ಎಷ್ಟು ನಷ್ಟ ಪಡಿಸಿರುವ ಹಿನ್ನೆಲೆಯಲ್ಲಿ ಪವನ್ ಕುಮಾರ್ ಕೆ.ಆರ್, ವಿನೋದ್ ಕಾರ್ಯಪ್ಪ ಸುಹಾಸ್ ಶೆಟ್ಟಿ, ಮೇಲೆ ಪೊಲೀಸರು ಬಿ.ಎನ್ ಎಸ್ 292, 324 (5)189(2) ರ ಅಡಿಯಲ್ಲಿ ಮೊಕದಮೆ ದಾಖಲು ಮಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ಭಾಗಿಯಾದ ಇತರರನ್ನು ಕೂಡ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು