9:03 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ಪ್ರಕರಣ: 3 ಮಂದಿ ವಿರುದ್ಧ ಮೊಕದ್ದಮೆ; ಉಳಿದವರನ್ನು ಪತ್ತೆಹಚ್ಚಲು ಪೊಲೀಸರಿಂದ ಕ್ರಮ

05/10/2025, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ನಡೆಸಿ ಸೊತ್ತುಗಳ ಹಾನಿಪಡಿಸಿದ ಪ್ರಕರಣ ಸಂಬಂಧಿಸಿದಂತೆ ಮೂವರ ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಉಳಿದವರನ್ನು ಪತ್ತೆಹಚ್ಚಲು ಪೊಲೀಸರು ಕ್ರಮಕೈಗೊಂಡಿದ್ದಾರೆ.


ಮಡಿಕೇರಿಯ ದಸರಾ ಕಲಾ ವೇದಿಕೆಯಲ್ಲಿ ಬಹುಮಾನ ವಿತರಣೆ ಸಂದರ್ಭ ಅಸಮಾಧಾನ ವ್ಯಕ್ತಪಡಿಸಿ ವೇದಿಕೆ ಏರಿ “ಮೋಸ.. ಮೋಸ” ಎಂದು ಘೋಷಣೆ ಕೂಗಿ ಅಲ್ಲಿದ್ದ ಪೊಡಿಯಮ್, ಎಲ್.ಇ.ಡಿ, ಧ್ವನಿವರ್ಧಕ, ಲೈಟ್ ಗಳನ್ನು ಹೊಡೆದು ಹಾಕಿ ಹಾಗೆ ಬಹುಮಾನಕ್ಕೆ ಇಟ್ಟ ಚಿನ್ನ ಹಾಗೂ ಬೆಳ್ಳಿಯ ಬಹುಮಾನಗಳನ್ನು ವೇದಿಕೆಯಿಂದ ಕೆಳಗೆ ಬಿಸಾಕಿ, 150 ಕುರ್ಚಿಗಳನ್ನು ಹಾನಿಪಡಿಸಿ ಒಟ್ಟು ಎರಡು ಲಕ್ಷ ರೂಪಾಯಿ ಎಷ್ಟು ನಷ್ಟ ಪಡಿಸಿರುವ ಹಿನ್ನೆಲೆಯಲ್ಲಿ ಪವನ್ ಕುಮಾರ್ ಕೆ.ಆರ್, ವಿನೋದ್ ಕಾರ್ಯಪ್ಪ ಸುಹಾಸ್ ಶೆಟ್ಟಿ, ಮೇಲೆ ಪೊಲೀಸರು ಬಿ.ಎನ್ ಎಸ್ 292, 324 (5)189(2) ರ ಅಡಿಯಲ್ಲಿ ಮೊಕದಮೆ ದಾಖಲು ಮಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ಭಾಗಿಯಾದ ಇತರರನ್ನು ಕೂಡ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು