3:34 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ಪ್ರಕರಣ: 3 ಮಂದಿ ವಿರುದ್ಧ ಮೊಕದ್ದಮೆ; ಉಳಿದವರನ್ನು ಪತ್ತೆಹಚ್ಚಲು ಪೊಲೀಸರಿಂದ ಕ್ರಮ

05/10/2025, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಾಂಧಲೆ ನಡೆಸಿ ಸೊತ್ತುಗಳ ಹಾನಿಪಡಿಸಿದ ಪ್ರಕರಣ ಸಂಬಂಧಿಸಿದಂತೆ ಮೂವರ ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಉಳಿದವರನ್ನು ಪತ್ತೆಹಚ್ಚಲು ಪೊಲೀಸರು ಕ್ರಮಕೈಗೊಂಡಿದ್ದಾರೆ.


ಮಡಿಕೇರಿಯ ದಸರಾ ಕಲಾ ವೇದಿಕೆಯಲ್ಲಿ ಬಹುಮಾನ ವಿತರಣೆ ಸಂದರ್ಭ ಅಸಮಾಧಾನ ವ್ಯಕ್ತಪಡಿಸಿ ವೇದಿಕೆ ಏರಿ “ಮೋಸ.. ಮೋಸ” ಎಂದು ಘೋಷಣೆ ಕೂಗಿ ಅಲ್ಲಿದ್ದ ಪೊಡಿಯಮ್, ಎಲ್.ಇ.ಡಿ, ಧ್ವನಿವರ್ಧಕ, ಲೈಟ್ ಗಳನ್ನು ಹೊಡೆದು ಹಾಕಿ ಹಾಗೆ ಬಹುಮಾನಕ್ಕೆ ಇಟ್ಟ ಚಿನ್ನ ಹಾಗೂ ಬೆಳ್ಳಿಯ ಬಹುಮಾನಗಳನ್ನು ವೇದಿಕೆಯಿಂದ ಕೆಳಗೆ ಬಿಸಾಕಿ, 150 ಕುರ್ಚಿಗಳನ್ನು ಹಾನಿಪಡಿಸಿ ಒಟ್ಟು ಎರಡು ಲಕ್ಷ ರೂಪಾಯಿ ಎಷ್ಟು ನಷ್ಟ ಪಡಿಸಿರುವ ಹಿನ್ನೆಲೆಯಲ್ಲಿ ಪವನ್ ಕುಮಾರ್ ಕೆ.ಆರ್, ವಿನೋದ್ ಕಾರ್ಯಪ್ಪ ಸುಹಾಸ್ ಶೆಟ್ಟಿ, ಮೇಲೆ ಪೊಲೀಸರು ಬಿ.ಎನ್ ಎಸ್ 292, 324 (5)189(2) ರ ಅಡಿಯಲ್ಲಿ ಮೊಕದಮೆ ದಾಖಲು ಮಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ಭಾಗಿಯಾದ ಇತರರನ್ನು ಕೂಡ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು