7:11 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ

05/10/2025, 14:37

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರ ಪ್ರದರ್ಶನದ ಬೆಂಗಳೂರು ವಿಭಾಗದಲ್ಲಿ ಚಿತ್ರದುರ್ಗ ಜಿಲ್ಲೆಯ ರಾಜ ವೀರ ಮದಕರಿ ನಾಯಕ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.
ಚಿತ್ರದುರ್ಗದ ಐತಿಹಾಸಿಕ ಕಲ್ಲಿನ ಕೋಟೆ, ರಾಜಾ ಮದಕರಿ ನಾಯಕ ಆನೆಯ ಮದವನ್ನು ಅಡಗಿಸುತ್ತಿರುವ ದೃಶ್ಯ,ಒಂಟಿಕಂಬದ ಬಸವಣ್ಣ, ಕೋಟೆಯನ್ನು ರಕ್ಷಿಸುತ್ತಿರುವ ಸೈನಿಕರು, ಕಹಳೆ ಊದುತ್ತಿರುವ ಸೈನಿಕರು,ಆಡುಮಲ್ಲೇಶ್ವರ ಮೃಗಾಲಯ ಸೇರಿದಂತೆ ವನ್ಯಜೀವಿಗಳು ಇರುವಂತಹ ಸ್ಥಬ್ದ ಚಿತ್ರ ನೋಡುಗರನ್ನು ಮನಸೂರೆಗೊಳಿಸಿದ್ದು, ಹೀಗಾಗಿ ದಸರಾ ಮಹೋತ್ಸವದಲ್ಲಿ ಈ ಸ್ತಬ್ದಚಿತ್ರಕ್ಕೆ ಬೆಂಗಳೂರು ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದೆ. ಮೈಸೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) ಸ್ತಬ್ಧಚಿತ್ರ ಎರಡನೇ ಬಹುಮಾನ ಪಡೆದಿದೆ.
ಆರೋಗ್ಯಪೂರ್ಣ ಮನಸ್ಸು, ನಶಾಮುಕ್ತ ಕ್ಯಾಂಪಸ್‌ ಎಂಬ ಥೀಮ್‌ನೊಂದಿಗೆ ಗಮನಸೆಳೆದ ಸ್ತಬ್ಧಚಿತ್ರ ಕೇಂದ್ರ/ರಾಜ್ಯ ಹಾಗೂ ವಿವಿಧ ನಿಗಮಗಳ ವಿಭಾಗದಲ್ಲಿ ಎರಡನೇ ಬಹುಮಾನಕ್ಕೆ ಪಾತ್ರವಾಯಿತು. ಬೆಳಗಾವಿಯ ಶ್ರೀ ಮಹಾಕಾಳಿ ಮಾಯಕ್ಕಾದೇವಿ ದೇವಸ್ಥಾನ ಚಿಂಚಲಿ ಸ್ತಬ್ಧಚಿತ್ರಕ್ಕೆ ಮೂರನೇ ಸ್ಥಾನ ಲಭಿಸಿದೆ ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು