ಇತ್ತೀಚಿನ ಸುದ್ದಿ
ಮಂಗಳೂರು ಪಾಲ್ದನೆ ಚರ್ಚ್ ನಲ್ಲಿ ವಾಹನಗಳಿಗೆ ಆಶೀರ್ವಾದ ಕಾರ್ಯಕ್ರಮ
05/10/2025, 21:38

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾಹನಗಳನ್ನು ಆಶೀರ್ವಾದಿಸುವ ಕಾರ್ಯಕ್ರಮ ಭಾನುವಾರ ನಡೆಯಿತು.
ಚರ್ಚ್ ನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಬಲಿಪೂಜೆಯ ಬಳಿಕ ಪವಿತ್ರ ಜಲವನ್ನು ಸಂಪ್ರೋಕ್ಷಣೆ ಮಾಡಿ ವಾಹನಗಳನ್ನು ಆಶೀರ್ವದಿಸುವ ಕಾರ್ಯಕ್ರಮ ನೆರವೇರಿಸಿದರು. ವಾಹನಗಳು ಮತ್ತು ಅದನ್ನು ಚಲಾಯಿಸುವವರು ಹಾಗೂ ವಾಹನಗಳಲ್ಲಿ ಪ್ರಯಾಣಿಸುವವರ ಸುರಕ್ಷತೆಗಾಗಿ ವಿಶೇಷವಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪ್ರಾರ್ಥನಾ ಗೀತೆ ‘ಹಿಸೊಪಾನ್ ಮ್ಹಜೆರ್, ಉದಾಕ್ ಶಿಂಪ್ಡಾಯ್ ಏ ಸೊಮಿಯಾ, ಆನಿ ಹಾಂವ್ ನಿತಳ್ ಜಾತಲೊಂ; ಧುಂ ತು ಮ್ಹಾಕಾ, ಆನಿ ಹಿಮಾ ಪ್ರಾಸ್ ಧವೊ ಜಾತಲೊಂ’ ಇದನ್ನು ಹಾಡಲಾಯಿತು. ಕಾರ್ಯಕ್ರಮದಲ್ಲಿ ನೂರಕ್ಕೂ ಆಧಿಕ ವಾಹನಗಳನ್ನು ಆಶೀರ್ವಾದ ಮಾಡಲಾಯಿತು.
ಈ ಸಮಾರಂಭದಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.