9:20 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ನಲ್ಲಿ ವಾಹನಗಳಿಗೆ ಆಶೀರ್ವಾದ ಕಾರ್ಯಕ್ರಮ

05/10/2025, 21:38

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾಹನಗಳನ್ನು ಆಶೀರ್ವಾದಿಸುವ ಕಾರ್ಯಕ್ರಮ ಭಾನುವಾರ ನಡೆಯಿತು.
ಚರ್ಚ್ ನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್‌ ಕುವೆಲ್ಲೊ ಅವರು ಬಲಿಪೂಜೆಯ ಬಳಿಕ ಪವಿತ್ರ ಜಲವನ್ನು ಸಂಪ್ರೋಕ್ಷಣೆ ಮಾಡಿ ವಾಹನಗಳನ್ನು ಆಶೀರ್ವದಿಸುವ ಕಾರ್ಯಕ್ರಮ ನೆರವೇರಿಸಿದರು. ವಾಹನಗಳು ಮತ್ತು ಅದನ್ನು ಚಲಾಯಿಸುವವರು ಹಾಗೂ ವಾಹನಗಳಲ್ಲಿ ಪ್ರಯಾಣಿಸುವವರ ಸುರಕ್ಷತೆಗಾಗಿ ವಿಶೇಷವಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪ್ರಾರ್ಥನಾ ಗೀತೆ ‘ಹಿಸೊಪಾನ್‌ ಮ್ಹಜೆರ್‌, ಉದಾಕ್ ಶಿಂಪ್ಡಾಯ್‌ ಏ ಸೊಮಿಯಾ, ಆನಿ ಹಾಂವ್ ನಿತಳ್ ಜಾತಲೊಂ; ಧುಂ ತು ಮ್ಹಾಕಾ, ಆನಿ ಹಿಮಾ ಪ್ರಾಸ್‌ ಧವೊ ಜಾತಲೊಂ’ ಇದನ್ನು ಹಾಡಲಾಯಿತು. ಕಾರ್ಯಕ್ರಮದಲ್ಲಿ ನೂರಕ್ಕೂ ಆಧಿಕ ವಾಹನಗಳನ್ನು ಆಶೀರ್ವಾದ ಮಾಡಲಾಯಿತು.


ಈ ಸಮಾರಂಭದಲ್ಲಿ ಚರ್ಚ್‌ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು