8:51 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

Raichur | ಮಸ್ಕಿ: 55ನೇ ವರ್ಷದ ಮಹಾದೇವಿ ಪುರಾಣ ಮಹೋತ್ಸವ, ರಥೋತ್ಸವ

05/10/2025, 21:48

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnata@gmail.com

ಮಸ್ಕಿ ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ 55ನೇ ವರ್ಷದ ಮಹಾದೇವಿ ಪುರಾಣ ಮಹೋತ್ಸವ ರಥೋತ್ಸವ ಪರಂಪರೆಯ ಗುರುಗಳಾದ ಶ್ರೀ ಷಟಸ್ಥಲ ಬ್ರಹ್ಮ ಪರ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಿತು.
ಪ್ರತಿವರ್ಷದಂತೆ ಈ ವರ್ಷವೂ ಮಹಾದೇವಿ ಪುರಾಣ ಮಸ್ಕಿ ದಸರಾ ಉತ್ಸವ ಮೈಸೂರು ದಸರಾ ಜಂಬೂಸವಾರಿ ಮಾದರಿಯಲ್ಲಿ ವೇದಮೂರ್ತಿ ಚಂದ್ರಯ್ಯ ತಾರಾನಗರ ಸಂಡೂರು ತರ ಕಲಾತಂಡದಿಂದ ವೀರಗಾಸೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರಿಂದ ವಿವಿಧ ಜನ ಜಾನಪದ ಕಲಾತಂಡ ವೈಭವ ಶ್ರೀ ಬ್ರಹ್ಮರಂಭದ ದಸರಾ ವೈಭವ ದಂದು ಬೆಳಿಗ್ಗೆ 6:00 ಗಂಟೆಗೆ ನಡೆಯುವುದು.

ಇಂದು ನಡೆದ ಕಾರ್ಯಕ್ರಮದಲ್ಲಿ ಅಂತರಗಂಗೆ ಪಂಪಾಯಸ್ವಾಮಿ ಸಾಲಿಮಠ ಇವರ ವಿರಚಿತ ಸುಕ್ಷೇತ್ರ ಮಸ್ಕಿ ಬ್ರಹ್ಮರಂಬ ಕರುಣೆ ಕವನ ಸಂಕಲನ ಬಿಡುಗಡೆ ಮಾಡಲಾಯಿತು. ಉಪನ್ಯಾಸ ನೀಡಿದ ಜಗದ್ಗುರು ಶ್ರೀ ಸದಾಶಿವ ಮಹಾಸ್ವಾಮಿಗಳು ಶಿವಾನಂದ ಬ್ರಹ್ಮಮಠ ಗದಗ್ ಮಹಿಳೆಯರು ಮೊದಲು ಸಂಸ್ಕಾರ ಕಲೆತು ಗುರುವಿನ ಕೃಪೆಗೆ ಪಾತ್ರರಾಗಬೇಕೆಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪ್ರತಾಪ್ ಗೌಡ ಮಾಜಿ ಶಾಸಕ ಹಾಗೂ ಮಸ್ಕಿಯ ಕೇಂದ್ರ ಬಿಂದು ವರ ರುದ್ರಮುನಿ ಶಿವಾಚಾರ್ಯ ಮಹಾದೇವರು ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಸುತ್ತಮುತ್ತ ಗ್ರಾಮಗಳಿಂದ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು