3:33 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಬೆಂಗಳೂರು: 68 ಪರಿಸರಸ್ನೇಹಿ ವಾಹನಕ್ಕೆ ಮುಖ್ಯಮಂತ್ರಿ ಚಾಲನೆ

06/10/2025, 19:53

ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಿ: ಖಂಡ್ರೆ

ಹಸಿರು ಪಟಾಕಿ ಮಾರುವುದಾಗಿ ಮುಚ್ಚಳಿಕೆ ಬರೆಸಿಕೊಳ್ಳಿ:ಈಶ್ವರ ಖಂಡ್ರೆ

ಬೆಂಗಳೂರು(reporterkarnataka.com): ಪಟಾಕಿ ಮಳಿಗೆ ಮಾಲೀಕರಿಂದ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ.


ವಿಧಾನಸೌಧದ ಮೆಟ್ಟಿಲುಗಳ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಡಳಿಯ ಅಧ್ಯಕ್, ನರೇಂದ್ರ ಸ್ವಾಮಿ ಅವರೊಂದಿಗೆ 68 ಪರಿಸರ ಸ್ನೇಹಿ(ಇವಿ) ವಾಹನಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡುವವರ ಪರವಾನಗಿ ರದ್ದುಪಡಿಸಲು ಕ್ರಮ ವಹಿಸುವಂತೆ ಸೂಚಿಸಿದರು.
15 ವರ್ಷ ಪೂರೈಸಿದ ಡಿಸೆಲ್ ವಾಹನಗಳನ್ನು ಬಳಕೆ ಮಾಡುವಂತಿಲ್ಲ. ಅದನ್ನು ಸ್ಕ್ರ್ಯಾಪ್ ನೀತಿಯಂತೆ ಬಳಕೆಯಿಂದ ದೂರವಿಡಬೇಕು. ಮಂಡಳಿಯಲ್ಲಿ ವಾಹನಗಳ ಕೊರತೆಯಿಂದ ಏಕ ಬಳಕೆ ಪ್ಲಾಸ್ಟಿಕ್, ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ವಿಲೇವಾರಿ ಘಟಕಗಳ ಮೇಲೆ ನಿಗಾ ಇಡಲು ಮತ್ತು ಏಕ ಬಳಕೆ ಪ್ಲಾಸ್ಟಿಕ್ ತಯಾರಿಕಾ ಘಟಕ, ಮಳಿಗೆಗಳ ತಪಾಸಣೆ, ಪರಿಶೀಲನೆ ಮಾಡಲು, ಜಲ ಮೂಲಗಳ ಗುಣಮಟ್ಟ ಪರೀಕ್ಷೆ ಮಾಡಲು ಅಡ್ಡಿಯಾಗುತ್ತಿತ್ತು. ಈ ನಿಟ್ಟಿನಲ್ಲಿ 68 ಇವಿ ವಾಹನಗಳಿಗೆ ಮಂಡಳಿ ಕಳುಹಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದರು.
ಈ ವಾಹನಗಳನ್ನು ಸದ್ಬಳಕೆ ಮಾಡಿಕೊಂಡು, ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಪರಿಸರ ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಮಂಡಳಿಯ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು