8:32 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 53 ಲಕ್ಷ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

07/10/2025, 20:18

ಮಂಗಳೂರು(reporterkarnataka.com): ರಾಜ್ಯದಲ್ಲಿ 2 ಕೋಟಿ ಅಸಂಘಟಿತ ಕಾರ್ಮಿಕರುಗಳಿದ್ದು, 53 ಲಕ್ಷ ಸಂಘಟಿತ ಕಾರ್ಮಿಕರುಗಳಿದ್ದು, ಸಂಘಟಿತ ಕಾರ್ಮಿಕರಿಗೆ ಈಗಾಗಲೇ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.

ಅವರು ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ರಾಜ್ಯದಲ್ಲಿ ನೊಂದಾಯಿಸಿಕೊಂಡಂತಹ 18 ರಿಂದ 60 ವರ್ಷದವರಿಗೆಲ್ಲರಿಗೂ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು. ಇಲ್ಲಿಯ ತನಕ ಕಾರ್ಮಿಕ ವೇತನ ಬೋರ್ಡ್‌ಗೆ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತಿತ್ತು. ಆದರೆ ಈಗ ಮೊದಲ ಬಾರಿಗೆ ರಾಜಕೀಯ ವ್ಯಕ್ತಿಯನ್ನು ಹಾಗೂ ಸಾಮಾಜಿಕ ವಲಯದಲ್ಲಿ ತೊಡಗಿಸಿಕೊಂಡಿದ್ದು, ಅಧ್ಯಕ್ಷರು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಈಗಾಗಲೇ ಕನಿಷ್ಠ ವೇತನವನ್ನು ನಗರ-ಗ್ರಾಮೀಣ ಪ್ರದೇಶದ ಆದಾರದಲ್ಲಿ ೧೪ ರಿಂದ ೧೯ ಸಾವಿರ ರೂ. ವರೆಗೆ ಅನುಮೋದನೆಗೊಂಡಿದ್ದು, ಮುಂದಿನ ದಿನದಲ್ಲಿ ಜನರ ಜೀವನ ವೆಚ್ಚದ ಆದಾರವಾಗಿಟ್ಟುಕೊಂಡು ಕನಿಷ್ಠ ವೇತನವನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
ಕನಿಷ್ಠ ವೇತನ ಸಲಹಾ ಮಂಡಳಿಯು ರಾಜ್ಯದೆಲ್ಲೆಡೆ ಕಾರ್ಮಿಕರನ್ನು ಭೇಟಿ ಮಾಟಿ ಮಾಡಿ ಅವರಿಂದ ಬಂದ ಮನವಿ-ಸಲಹೆ ಪತ್ರಗಳನ್ನು ಸರ್ಕಾರಕ್ಕೆ ಮುಟ್ಟಿಸಲಾಗುವುದು ಎಂದ ಅವರು ಕರಾವಳಿಯಲ್ಲಿ ಬೀಡಿ ಕಾರ್ಮಿಕರು ಹೆಚ್ಚಾಗಿದ್ದು, ಅವರ ಸಮಸ್ಯೆಯನ್ನು ಅದ್ಯಾಯನ ಮಾಡಿ ಪರಿಹರಿಸಲಾಗುವುದು ಎಂದು ಹೇಳಿದರು.
ಪ್ರಮುಖರಾದ ವಿಶ್ವಾಸ್ ದಾಸ್, ಸದಾನಂದ ಪಾವಂಜೆ, ಮುಸ್ತಾಫ, ಶುಭೋದಯ ಆಳ್ವ, ಜಯಶೀಲ ಅಡ್ಯಾಂತಾಯ, ಲಾರೆನ್ಸ್ ಡಿಸೋಜಾ, ನಿತ್ಯಾಧರ ಶೆಟ್ಟಿ ಉಪಸ್ಥಿತರಿದ್ದರು.

*ಅ.10ಕ್ಕೆ ಕಾರ್ಮಿಕ ಸಚಿವರು ಜಿಲ್ಲೆಗೆ*

ಅ.೧೦ ರಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭೇಟಿ ನೀಡಲಿದ್ದು, ಅವರು ಜಿಲ್ಲೆಯ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು