2:00 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 53 ಲಕ್ಷ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

07/10/2025, 20:18

ಮಂಗಳೂರು(reporterkarnataka.com): ರಾಜ್ಯದಲ್ಲಿ 2 ಕೋಟಿ ಅಸಂಘಟಿತ ಕಾರ್ಮಿಕರುಗಳಿದ್ದು, 53 ಲಕ್ಷ ಸಂಘಟಿತ ಕಾರ್ಮಿಕರುಗಳಿದ್ದು, ಸಂಘಟಿತ ಕಾರ್ಮಿಕರಿಗೆ ಈಗಾಗಲೇ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.

ಅವರು ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ರಾಜ್ಯದಲ್ಲಿ ನೊಂದಾಯಿಸಿಕೊಂಡಂತಹ 18 ರಿಂದ 60 ವರ್ಷದವರಿಗೆಲ್ಲರಿಗೂ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು. ಇಲ್ಲಿಯ ತನಕ ಕಾರ್ಮಿಕ ವೇತನ ಬೋರ್ಡ್‌ಗೆ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತಿತ್ತು. ಆದರೆ ಈಗ ಮೊದಲ ಬಾರಿಗೆ ರಾಜಕೀಯ ವ್ಯಕ್ತಿಯನ್ನು ಹಾಗೂ ಸಾಮಾಜಿಕ ವಲಯದಲ್ಲಿ ತೊಡಗಿಸಿಕೊಂಡಿದ್ದು, ಅಧ್ಯಕ್ಷರು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಈಗಾಗಲೇ ಕನಿಷ್ಠ ವೇತನವನ್ನು ನಗರ-ಗ್ರಾಮೀಣ ಪ್ರದೇಶದ ಆದಾರದಲ್ಲಿ ೧೪ ರಿಂದ ೧೯ ಸಾವಿರ ರೂ. ವರೆಗೆ ಅನುಮೋದನೆಗೊಂಡಿದ್ದು, ಮುಂದಿನ ದಿನದಲ್ಲಿ ಜನರ ಜೀವನ ವೆಚ್ಚದ ಆದಾರವಾಗಿಟ್ಟುಕೊಂಡು ಕನಿಷ್ಠ ವೇತನವನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
ಕನಿಷ್ಠ ವೇತನ ಸಲಹಾ ಮಂಡಳಿಯು ರಾಜ್ಯದೆಲ್ಲೆಡೆ ಕಾರ್ಮಿಕರನ್ನು ಭೇಟಿ ಮಾಟಿ ಮಾಡಿ ಅವರಿಂದ ಬಂದ ಮನವಿ-ಸಲಹೆ ಪತ್ರಗಳನ್ನು ಸರ್ಕಾರಕ್ಕೆ ಮುಟ್ಟಿಸಲಾಗುವುದು ಎಂದ ಅವರು ಕರಾವಳಿಯಲ್ಲಿ ಬೀಡಿ ಕಾರ್ಮಿಕರು ಹೆಚ್ಚಾಗಿದ್ದು, ಅವರ ಸಮಸ್ಯೆಯನ್ನು ಅದ್ಯಾಯನ ಮಾಡಿ ಪರಿಹರಿಸಲಾಗುವುದು ಎಂದು ಹೇಳಿದರು.
ಪ್ರಮುಖರಾದ ವಿಶ್ವಾಸ್ ದಾಸ್, ಸದಾನಂದ ಪಾವಂಜೆ, ಮುಸ್ತಾಫ, ಶುಭೋದಯ ಆಳ್ವ, ಜಯಶೀಲ ಅಡ್ಯಾಂತಾಯ, ಲಾರೆನ್ಸ್ ಡಿಸೋಜಾ, ನಿತ್ಯಾಧರ ಶೆಟ್ಟಿ ಉಪಸ್ಥಿತರಿದ್ದರು.

*ಅ.10ಕ್ಕೆ ಕಾರ್ಮಿಕ ಸಚಿವರು ಜಿಲ್ಲೆಗೆ*

ಅ.೧೦ ರಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭೇಟಿ ನೀಡಲಿದ್ದು, ಅವರು ಜಿಲ್ಲೆಯ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು