7:19 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 53 ಲಕ್ಷ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

07/10/2025, 20:18

ಮಂಗಳೂರು(reporterkarnataka.com): ರಾಜ್ಯದಲ್ಲಿ 2 ಕೋಟಿ ಅಸಂಘಟಿತ ಕಾರ್ಮಿಕರುಗಳಿದ್ದು, 53 ಲಕ್ಷ ಸಂಘಟಿತ ಕಾರ್ಮಿಕರುಗಳಿದ್ದು, ಸಂಘಟಿತ ಕಾರ್ಮಿಕರಿಗೆ ಈಗಾಗಲೇ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.

ಅವರು ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ರಾಜ್ಯದಲ್ಲಿ ನೊಂದಾಯಿಸಿಕೊಂಡಂತಹ 18 ರಿಂದ 60 ವರ್ಷದವರಿಗೆಲ್ಲರಿಗೂ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು. ಇಲ್ಲಿಯ ತನಕ ಕಾರ್ಮಿಕ ವೇತನ ಬೋರ್ಡ್‌ಗೆ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತಿತ್ತು. ಆದರೆ ಈಗ ಮೊದಲ ಬಾರಿಗೆ ರಾಜಕೀಯ ವ್ಯಕ್ತಿಯನ್ನು ಹಾಗೂ ಸಾಮಾಜಿಕ ವಲಯದಲ್ಲಿ ತೊಡಗಿಸಿಕೊಂಡಿದ್ದು, ಅಧ್ಯಕ್ಷರು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಈಗಾಗಲೇ ಕನಿಷ್ಠ ವೇತನವನ್ನು ನಗರ-ಗ್ರಾಮೀಣ ಪ್ರದೇಶದ ಆದಾರದಲ್ಲಿ ೧೪ ರಿಂದ ೧೯ ಸಾವಿರ ರೂ. ವರೆಗೆ ಅನುಮೋದನೆಗೊಂಡಿದ್ದು, ಮುಂದಿನ ದಿನದಲ್ಲಿ ಜನರ ಜೀವನ ವೆಚ್ಚದ ಆದಾರವಾಗಿಟ್ಟುಕೊಂಡು ಕನಿಷ್ಠ ವೇತನವನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
ಕನಿಷ್ಠ ವೇತನ ಸಲಹಾ ಮಂಡಳಿಯು ರಾಜ್ಯದೆಲ್ಲೆಡೆ ಕಾರ್ಮಿಕರನ್ನು ಭೇಟಿ ಮಾಟಿ ಮಾಡಿ ಅವರಿಂದ ಬಂದ ಮನವಿ-ಸಲಹೆ ಪತ್ರಗಳನ್ನು ಸರ್ಕಾರಕ್ಕೆ ಮುಟ್ಟಿಸಲಾಗುವುದು ಎಂದ ಅವರು ಕರಾವಳಿಯಲ್ಲಿ ಬೀಡಿ ಕಾರ್ಮಿಕರು ಹೆಚ್ಚಾಗಿದ್ದು, ಅವರ ಸಮಸ್ಯೆಯನ್ನು ಅದ್ಯಾಯನ ಮಾಡಿ ಪರಿಹರಿಸಲಾಗುವುದು ಎಂದು ಹೇಳಿದರು.
ಪ್ರಮುಖರಾದ ವಿಶ್ವಾಸ್ ದಾಸ್, ಸದಾನಂದ ಪಾವಂಜೆ, ಮುಸ್ತಾಫ, ಶುಭೋದಯ ಆಳ್ವ, ಜಯಶೀಲ ಅಡ್ಯಾಂತಾಯ, ಲಾರೆನ್ಸ್ ಡಿಸೋಜಾ, ನಿತ್ಯಾಧರ ಶೆಟ್ಟಿ ಉಪಸ್ಥಿತರಿದ್ದರು.

*ಅ.10ಕ್ಕೆ ಕಾರ್ಮಿಕ ಸಚಿವರು ಜಿಲ್ಲೆಗೆ*

ಅ.೧೦ ರಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭೇಟಿ ನೀಡಲಿದ್ದು, ಅವರು ಜಿಲ್ಲೆಯ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು