7:00 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ರಚನಾ ಪ್ರಶಸ್ತಿ ಪುರಸ್ಕೃತ ಶೋಭಾ ಮೆಂಡೋನ್ಸಾಗೆ ವಾಮಂಜೂರು ಚರ್ಚ್ ನಿಂದ ಅಭಿನಂದನೆ

08/10/2025, 14:14

ಮಂಗಳೂರು(reporterkarnataka.com): ರಚನಾ – ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಚನಾ ಅತ್ಯುತ್ತಮ ಮಹಿಳೆ 2025 ( Rachana Outstanding Woman Award 2025) ಪ್ರಶಸ್ತಿ ಪುರಸ್ಕೃತೆ ಶೋಭಾ ಮೆಂಡೋನ್ಸಾ ಅವರನ್ನು ವಾಮಂಜೂರು ಚರ್ಚಿನ ಪ್ರಧಾನ ಧರ್ಮಗುರು ವಂದನೀಯ ಫಾ. ಜೇಮ್ಸ್ ಡಿ ಸೋಜಾ ಅವರು ಭಕ್ತಾದಿಗಳ ಸಮ್ಮುಖದಲ್ಲಿ ಹೂಗುಚ್ಛ ನೀಡಿ ಅಭಿನಂದಿಸಿದರು.

ಚರ್ಚ್ ಉಪಾಧ್ಯಕ್ಷ ಚಾರ್ಲ್ಸ್ ಪಾಯ್ಸ್ ಮಾತನಾಡಿ ಶೋಭಾ ಮೆಂಡೋನ್ಸಾ ಅವರು ವಾಮಂಜೂರು ಚರ್ಚ್ ಸಮುದಾಯಕ್ಕೆ ನೀಡಿರುವ ದೇಣಿಗೆಯನ್ನು ಹಾಗೂ ವಿದೇಶದಲ್ಲಿ ಅವರು ನಡೆಸುವ ಉದ್ಯಮದ ಮೂಲಕ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳನ್ನು ಸ್ಮರಿಸಿ ಅಭಿನಂದಿಸಿದರು. ವಿಶೇಷವಾಗಿ 2007ರಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇರಿ ‘ಮೆಂಡೋನ್ಸಾ ಎಜ್ಯುಕೇಶನಲ್ ಫಂಡ್’ ಸ್ಥಾಪಿಸಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಸಹಾಯ ಧನ ನೀಡಿರುವುದಕ್ಕಾಗಿ ಹಾಗೂ ಇಲ್ಲಿ ಹಮ್ಮಿಕೊಂಡಿರುವ ಹತ್ತು ಹಲವು ಅಭಿವೃದ್ಧಿ ಕಾರ್ಯಗಳಿಗೆ ಅವರು ಮತ್ತು ಮೆಂಡೋನ್ಸಾ ಕುಟುಂಬದ ಸದಸ್ಯರು ನೀಡಿರುವ ದೇಣಿಗೆಗಳಿಗಾಗಿ ಅವರ ಉಪಕಾರ ಸ್ಮರಿಸಿದರು.
ಕಾಕತಾಳೀಯ ಎಂಬಂತೆ 2009 ರಲ್ಲಿ ಅವರ ಪತಿ ಜೇಮ್ಸ್ ಮೆಂಡೋನ್ಸಾ ಅವರಿಗೆ ರಚನಾ- ಅತ್ಯುತ್ತಮ ಅನಿವಾಸಿ ಭಾರತೀಯ ಪ್ರಶಸ್ತಿ – 2009 ನೀಡಿ ಗೌರವಿಸಲಾಗಿದ್ದ ಸಂದರ್ಭವನ್ನು ನೆನಪಿಸಿ ಅವರಿಗೂ ಅಭಿನಂದನೆ ಸಲ್ಲಿಸಿ ಚರ್ಚ್ ಪ್ರಧಾನ ಧರ್ಮಗುರುಗಳು ಹೂ ಗುಚ್ಛ ನೀಡಿ ಗೌರವಿಸಿದರು. ಚರ್ಚ್ ನ ಸಹಾಯಕ ಧರ್ಮ ಗುರು ವಂದನೀಯ ಫಾ. ಜೀವನ್ ಶೈಲೇಶ್ ಲೋಬೊ, ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಸಿ. ಎ. ಲೋವೆಲ್ ಮೊಂತೇರೊ, 21 ಆಯೋಗಗಳ ಸಂಯೋಜಕ ಅನಿಲ್ ಪಿಂಟೊ, ಧರ್ಮ ಭಗಿನಿಯರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು