6:32 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಹೈಕೋರ್ಟ್ ಆದೇಶ ಉಲ್ಲಂಘನೆ: ವಿಎಚ್ ಪಿ ಮುಖಂಡ ಶರಣ್ ಪಂಪ್‌ವೆಲ್‌ಗೆ 2 ಲಕ್ಷ ರೂ. ದಂಡ

09/10/2025, 18:56

ಬೆಂಗಳೂರು(reporterkarnataka.com): ರಾಜ್ಯ ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್‌ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ.
ರಾಜ್ಯ ಲೀಗಲ್‌ ಸರ್ವಿಸ್ ಅಥಾರಿಟಿಗೆ ಒಂದು ಲಕ್ಷ ರೂಪಾಯಿ, ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ ಒಂದು ಲಕ್ಷ ರೂಪಾಯಿ ನೀಡಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಾ ಯಾತ್ರೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವೇಶ ಮಾಡದಂತೆ ಶರಣ್ ಪಂಪ್‌ವೆಲ್‌ಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಇದನ್ನು ಪ್ರಶ್ನೆ ಮಾಡಿ ಶರಣ್ ಹೈಕೋರ್ಟ್ ಮೊರೆ ಹೋಗಿದ್ದರು. ನಂತರ ಕೆಲವು ಷರತ್ತು ವಿಧಿಸಿ ಹೈಕೋರ್ಟ್ ಜಿಲ್ಲಾಡಳಿತದ ನಿರ್ಬಂಧ ತೆರವು ಮಾಡಿತ್ತು.
ಶೋಭಾ ಯಾತ್ರೆಯಲ್ಲಿ ಭಾಗವಹಿಸಲು ಅವಕಾಶ ನೀಡಿತ್ತು. ಭಾಷಣ ಮಾಡದಂತೆ ಹೇಳಿತ್ತು. ಆದರೆ ಶೋಭಾ ಯಾತ್ರೆಯಲ್ಲಿ ಶರಣ್ ಭಾಷಣ ಮಾಡಿದ್ದರು. ಆದೇಶ ಉಲ್ಲಂಘನೆಯ ಕುರಿತು ಪೊಲೀಸರು ಹೈಕೋರ್ಟ್ ಗಮನಕ್ಕೆ ತಂದಿದ್ದು, ಇದನ್ನು ಪರಿಗಣಿಸಿದ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು