12:44 AM Tuesday17 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್ ನಲ್ಲಿ ಅಕ್ಟೋಬರ್ 12ರಂದು ವಾರ್ಷಿಕ ಹಬ್ಬ: 12 ಚರ್ಚ್ ಧರ್ಮಗುರುಗಳಿಂದ ಬಲಿಪೂಜೆ

09/10/2025, 18:58

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ವಾರ್ಷಿಕ ಹಬ್ಬ (ಸಾಂತ್ ಮಾರಿ) ವನ್ನು ಅಕ್ಟೋಬರ್ 12ರಂದು ವಿಜೃಂಭಣೆಯಿಂದ ಆಚರಿಸಲಾಗುವುದು.
ಅಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಧರ್ಮ ಪ್ರಾಂತ್ಯದ ವಿಶ್ರಾಂತ ಬಿಷಪ್ ಅತಿ ವಂದನೀಯ ಡಾ. ಅಲೋಷಿಯಸ್ ಪಾವ್ಲ್ ಡಿ’ ಸೋಜಾ ಅವರು ಬಲಿ ಪೂಜೆಯ ನೇತೃತ್ವ ವಹಿಸಿ ಸಮಸ್ತ ಭಕ್ತರನ್ನು ಆಶೀರ್ವದಿಸುವರು. ಪಾಲ್ದನೆ ಚರ್ಚ್ ಧರ್ಮ ಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಮತ್ತು ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯ 12 ಚರ್ಚ್ ಗಳ ಧರ್ಮ ಗುರುಗಳು ಬಲಿ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.
ಅದೇ ದಿನ ಐ ಸಿ ವೈ ಎಂ ಸದಸ್ಯರು ‘ನಶೀಬಚೊ ಖೆಳ್‌’ ಎಂಬ ಮನೋರಂಜನಾ ಕಾರ್ಯಕ್ರಮ ಮತ್ತು ಗೇಮ್ಸ್ ಗಳನ್ನು ನಡೆಸುವರು. ಅಲ್ಲದೆ ಸ್ಟಾಲ್ ಗಳ ವ್ಯವಸ್ಥೆಯನ್ನು ಮಾಡಲಿದ್ದಾರೆ. ಸಂಜೆ ‘ತಾಲೆಂತಾಚೊ ಸಂಭ್ರಮ್’ ಎಂಬ ಕಾರ್ಯಕ್ರಮವಿದ್ದು, ಅದರಲ್ಲಿ ಚರ್ಚಿನ ಸದಸ್ಯರಿಗೆ ವಿವಿಧ ಸ್ಪರ್ಧೆಗಳು, ಫುಡ್ ಫೆಸ್ಟಿವಲ್, ಪ್ರಸಿದ್ಧ ಗಾಯಕರಿಂದ ಸಂಗೀತ ಕಾರ್ಯಕ್ರಮ ಇರಲಿದೆ ಎಂದು ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು