4:21 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Raichuru | ಮಸ್ಕಿ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3.24 ಲಕ್ಷ ರೂ. ದಂಡ

09/10/2025, 19:13

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಜಮೀನಿಗೆ ಹೋಗಲು ದಾರಿ ಕೊಡದೆ ಇರುವುದರ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ನಗರದ ಮೂರನೆಯ ಹೆಚ್ಚುವರಿ ಜಿಲ್ಲಾ ಸತ್ಯ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 3.24 ಲಕ್ಷ ರೂ. ದಂಡ ವಿಧಿಸಿದೆ.
ಬಳಗಾನೂರ ಪೊಲೀಸ್ ಠಾಣೆ ವ್ಯಾಪ್ತಿಯ ಬರುವ ರಂಗಾಪುರ ಸರ್ವೇ ನಂಬರ್ 07ರಲ್ಲಿ
ಮೃತ ಶಿವರುದ್ರಪ್ಪ ಅವರ ಜಮೀನಿಗೆ ಹೋಗಲು ಆರೋಪಿತರು ದಾರಿ ರಸ್ತೆ ಕೊಡದೆ ಇದ್ದಿದ್ದರಿಂದ ಮೃತ ಶಿವರುದ್ರಪ್ಪನನ್ನು ತಮ್ಮ ಹೊಲದಿಂದ ಆರೋಪಿತರ ಹೊಲಕ್ಕೆ ಹೋಗುತ್ತಿದ್ದ ಕಾಲುವೆ ನೀರನ್ನು ಬಂದು ಮಾಡಿರುವುದರಿಂದ ಅದೇ ದ್ವೇಷದ ಹಿನ್ನೆಲೆಯಲ್ಲಿ..
ಆರೋಪಿತರು ಕೊಡಲೇ ಬಡಿಗೆಗಳನ್ನು ಹಿಡಿದು ಜಮೀನಿನಲ್ಲಿ ಅತಿಕ್ರಮಣವಾಗಿ ಪ್ರವೇಶ ಮಾಡಿ ಜಗಳ ತೆಗೆದು ಕೊಡಲಿ ಕಾವಿನಿಂದ ಮತ್ತು ಬಡಿಗೆಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ದೂರದ ವಿರುದ್ಧ ಬೆಳಗನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಸಿಂಧನೂರ್ ಅವರ ಪ್ರಕರಣ ವಾದಗಳನ್ನು ಆಲಿಸಿದ ಮೂರನೆಯ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿತರು ಅಪರಾಧ ಎಸಿಗಿದ್ದಾರೆಂದು ಪರಿಗಣಿಸಿ ಆರೋಪಿತರಿಗೆ ಜೀವಾವಧಿ ಶಿಕ್ಷೆ ಹಾಗೂ 3.24 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರ್ವ ಮಂಗಳ ಆರ್. ಗಡಕರಿ ವಾದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು