8:34 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ದೇರೆಬೈಲ್‌ ಬ್ಲೂಬೆರ್ರಿ ಹಿಲ್ಸ್ ನಲ್ಲಿ ಟೆಕ್ ಪಾರ್ಕ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸಂತಸ

10/10/2025, 13:25

ಮಂಗಳೂರು(reporterkarnataka.com): ನಗರದ ದೇರೆಬೈಲ್‌ ಬ್ಲೂಬೆರ್ರಿ ಹಿಲ್ಸ್ ರಸ್ತೆಯಲ್ಲಿ
ಟೆಕ್ ಪಾರ್ಕ್ ನಿರ್ಮಿಸಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129,113ರ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ. ಇದರಿಂದ ಕರಾವಳಿಯಲ್ಲಿ ಸಹಸ್ರಾರು ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ. ಟೆಕ್ ಪಾರ್ಕ್ ನಿರ್ಮಾಣಕ್ಕೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೃತಜ್ಞತೆಗಳು ಎಂದು ಪದ್ಮರಾಜ್ ಆರ್.ಪೂಜಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು