8:37 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

53 ಲಕ್ಷ ಕೋಟಿ ಇದ್ದ ಸಾಲ ಮೋದಿ ಪ್ರಧಾನಿಯಾದ ಬಳಿಕ 185 ಲಕ್ಷ ಕೋಟಿಗೆ ಏರಿಕೆಯಾಗಿದೆ: ಮಂಗಳೂರಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್

10/10/2025, 22:34

ಮಂಗಳೂರು(reporterkarnataka.com): 2014ರ ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನರೇಂದ್ರ ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು‌ ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು.
ಬಿಜೆಪಿಗರು ಚುನಾವಣೆ ಸಂದರ್ಭ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ, ಬದಲಾಗಿ ಪಾಕಿಸ್ತಾನ, ಮುಸಲ್ಮಾನ, ಅಪಘಾನಿಸ್ತಾನ ಬಗ್ಗೆ ಮಾತ್ರ ಮಾತನಾಡುತ್ತಾರೆ. ರಾಹುಲ್ ಗಾಂಧಿ ಇದುವರೆಗೆ ಸಾವಿರಕ್ಕೂ ಅಧಿಕ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಹೊರ ದೇಶಗಳಿಗೆ ಭೇಟಿ ನೀಡಿದ ಬಳಿಕ ಸಾಮಾನ್ಯವಾಗಿ ಪ್ರಾಧನಿಯಾದವರೂ ಪತ್ರಿಕಾಗೋಷ್ಠಿ ನಡೆಸುತ್ತಾರೆ. ಆದರೆ ಪ್ರಧಾನಿ ಮೋದಿ ಅವರು ತಿಂಗಳಿಗೆ ಒಂದು ಸುದ್ದಿಗೋಷ್ಠಿಯನ್ನೂ ನಡೆಸಿಲ್ಲ. ಬಿಹಾರ ಚುನಾವಣೆಗಾಗಿ ಬಿಜೆಪಿ ಸರಕಾರ ಒಂದು ವರ್ಷದ ಆಡಳಿತದ ಹಣವನ್ನು ಮಹಿಳೆಯರ ಖಾತೆಗೆ ಹತ್ತು ಸಾವಿರ ಹಾಕಲಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದರೆ ಬಸವಣ್ಣ, ಬುದ್ಧ, ಅಂಬೇಡ್ಕರ್, ಕಾಂಗ್ರೆಸ್ ಸಿದ್ಧಾಂತವುಳ್ಳ ಯುವಕರನ್ನು ಗುರುತಿಸಬೇಕು. ಕಟ್ಟೆ ಮೇಲೆ ನಿಂತು ಭಾಷಣ ಮಾತನಾಡುವ ಯುವಕರನ್ನು ಮುನ್ನೆಲೆಗೆ ತರಬೇಕು ಎಂದು ನುಡಿದರು.
ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರುವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮ ಜಾರಿಗೆ ತರಲಾಗಿದೆ. ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯನ್ನು ರಚಿಸಿದ್ದು, ಈ ಮಂಡಳಿಯ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಸುರೇಶ್ ಬಳ್ಳಾಲ್, ಪದ್ಮರಾಜ್ ಪೂಜಾರಿ, ಸದಾಶಿವ್ ಉಳ್ಳಾಲ್, ಟಿ.ಎಂ. ಶಹೀದ್, ಎಂ.ಎ ಗಫೂರ್, ಲಾವಣ್ಯ ಬಳ್ಳಾಲ್, ಮಮತಾ ಗಟ್ಟಿ, ಅನೀಲ್ ತಡ್ಕಲ್, ಸೇರಿಂದತೆ ಮುಖಂಡರು, ಬ್ಲಾಕ್ ಅಧ್ಯಕ್ಷರು ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು