1:29 AM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ವಿರಾಜಪೇಟೆ ಚನ್ನoಗೊಲ್ಲಿ ಸಮೀಪ ಇನೋವಾ ಕಾರು ಮರಕ್ಕೆ ಡಿಕ್ಕಿ: ಓರ್ವ ಸಾವು; ಇಬ್ಬರು ಗಂಭೀರ

11/10/2025, 11:18

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮೈಸೂರುನಿಂದ ವಿರಾಜಪೇಟೆಗೆ ಆಗಮಿಸುತ್ತಿದ್ದ ಇನೋವಾ ಕಾರೊಂದು ಚನ್ನoಗೊಲ್ಲಿ ಬಳಿ ಅಪಘಾತಕ್ಕೀಡಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.ಇನೋವಾ ಕಾರಿನ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ರಾಜ್ಯ ಹೆದ್ದಾರಿ ತಿತಿಮತಿ – ಗೋಣಿಕೊಪ್ಪ ಮುಖ್ಯ ರಸ್ತೆಯ ಚೆನ್ನಂಗೊಲ್ಲಿಯಲ್ಲಿ ಈ ಘಟನೆ ನಡೆದಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ 6 ಜನರಲ್ಲಿ ಒಬ್ಬರು ಸ್ಥಳದಲ್ಲಿಯೇ ಸಾವು ಕಂಡಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ರಮಾನಿಸಲಾಗಿದೆ.

ಕಾರಿನಲ್ಲಿದ್ದ ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಿದ ವ್ಯಕ್ತಿಯೊಬ್ಬರು ಅಪಘಾತ ಸಂಭವಿಸಿದಾಗ ಸುತ್ತ ಸೇರಿದ ಮಂದಿ ಅಪಘಾತಕ್ಕೆ ಈಡಾದವರನ್ನು ರಕ್ಷಿಸುವ ಬದಲು ವಿಡಿಯೋ ಮಾಡುತ್ತಾ ತಲ್ಲೀನರಾದ ಘಟನೆಯ ಕುರಿತು ಮಾತನಾಡಿ, ಹಲವರಿಗೆ ಮಾನವೀಯತೆ ಪಾಠವನ್ನು ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು