6:42 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ

11/10/2025, 11:40

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಹಿನೂರ್ ರಸ್ತೆಯಲ್ಲಿನ ಎಂ. ಎಂ. ಅಬ್ದುಲ್ ರೆಹಮಾನ್ ಎಂಬುವವರಿಗೆ ಸೇರಿದ ಬ್ರೈಟ್ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕಾರಣಕ್ಕೆ ಸಂಬಂಧಿದಂತೆ ಕೊಡಗು ಪೊಲೀಸರು 5 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೆಪ್ಟೆಂಬರ್ 25ರ ರಾತ್ರಿ ಸ್ಟುಡಿಯೋದ ಶಟರ್ಸ್ ಮುರಿದು ಕಲರ್ ಪ್ರಿಂಟರ್ ಹಾಗೂ ಕೇಬಲ್ ಗಳನ್ನು ಕಳುವಾಗಿರುವ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನತ್ತಿದ ಪೊಲೀಸರು ಮಡಿಕೇರಿ ತಾಲ್ಲೂಕಿನ ಬೇತು ಗ್ರಾಮದ ಮಹಮದ್ ಸುಹೇಲ್, ಹೊದವಾಡ ಗ್ರಾಮದ ಮಹಮದ್ ಮುಬಶೀರ್, ಮೊಹಮದ್ ಜೈನದ್ದಿನ್, ನಾಪೋಕ್ಲು ವಿನ ಕೊಳಕೇರಿ ಯ ಮುಜಾಮಿಲ್ ಹಾಗೂ ವಿರಾಜಪೇಟೆ ತಾಲ್ಲೂಕಿನ ಕುಂಜಿಲ ಗ್ರಾಮದ ಫಯಾಜ್ ರನ್ನು ಬಂಧಿಸಲಾಗಿದ್ದು, ಬಂಧಿತರಿಂದ ಒಂದು ಕಲರ್ ಪ್ರಿಂಟರ್ ಮತ್ತು ಕೇಬಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು