6:33 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಫಾದರ್‌ ಮುಲ್ಲರ್ಸ್‌ ಮೆಡಿಕಲ್‌ ಕಾಲೇಜು ಎಂಬಿಬಿಎಸ್‌ 27ನೇ ಬ್ಯಾಚ್‌ ಶೈಕ್ಷಣಿಕ ವರ್ಷಕ್ಕೆ ಚಾಲನೆ: ವೈಟ್‌ ಕೋಟ್‌ ಸಮಾರಂಭ

11/10/2025, 20:33

ಮಂಗಳೂರು(reporterkarnataka.com): ನಗರದ ಫಾದರ್‌ ಮುಲ್ಲರ್ಸ್‌ ಮೆಡಿಕಲ್‌ ಕಾಲೇಜಿನ ಎಂಬಿಬಿಎಸ್‌ ವಿದ್ಯಾರ್ಥಿಗಳ ಈ ಸಾಲಿನ 27ನೇ ಬ್ಯಾಚ್‌ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡುವುದು ಹಾಗೂ ವೈಟ್‌ ಕೋಟ್‌ ಸಮಾರಂಭವು ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆಯಿತು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕೆಥೋಲಿಕ್ ಶೈಕ್ಷಣಿಕ ಮಂಡಳಿಯ ಕಾರ್ಯದರ್ಶಿ ವಂ.ಡಾ|ಲಿಯೋ ಲಸ್ರಾಡೊ ಅವರು ಮಾತನಾಡುತ್ತಾ ಮೂರು ದಶಕಗಳ ಹಿಂದೆ ವೈದ್ಯರಾಗುವುದಕ್ಕೆ ತಮಗೆ ಇದ್ದ ಉತ್ಸಾಹವನ್ನು ನೆನಪಿಸಿಕೊಂಡು, ನನಗೆ ಆ ಕನಸು ನನಸಾಗಿಸಲು ಅಸಾಧ್ಯವಾದರೂ ವೈದ್ಯಕೀಯ ವೃತ್ತಿ ಬಗ್ಗೆ ಎಂದೆಂದೂ ಗೌರವ ಹೊಂದಿದ್ದೇನೆ ಎಂದರು.
ವಿದ್ಯಾರ್ಥಿಗಳು ಯಾವಾಗಲೂ ಜೀವನ ಪರ್ಯಂತ ಕಲಿಕೆ ಹಾಗೂ ಸೇವೆಯ ಪ್ರಯಾಣವನ್ನು ತಮ್ಮದಾಗಿಸಿಕೊಳ್ಳಬೇಕು, ಇತರರ ನೋವುಗಳನ್ನು ಅರಿತುಕೊಂಡು ಅವರಿಗಾಗಿ ಸೇವೆ ಸಲ್ಲಿಸುವುದರತ್ತ ಗಮನ ಹರಿಸಬೇಕು, ಅಲ್ಲದೆ ತಮ್ಮ ಹೆತ್ತವರ ಹಾಗೂ ಹಿತೈಷಿಗಳ ತ್ಯಾಗಗಳನ್ನು ಮರೆಯಬಾರದು, ಭಗವಂತನ ಮಾರ್ಗದರ್ಶನವನ್ನು ಎಂದಿಗೂ ಕೈಬಿಡಬಾರದು ಎಂದು ಸಲಹೆ ನೀಡಿದರು.
ಫಾದರ್‌ ಮುಲ್ಲರ್ಸ್‌ ವೈದ್ಯಕೀಯ ಕಾಲೇಜು ಚಿಕಿತ್ಸೆಯ ತನ್ನ ದೈವೀಕ ಅಭಿಯಾನವನ್ನು ಮುಂದುವರಿಸುತ್ತಾ ಬಂದಿದೆ, ಯಾವುದೇ ಲಾಭ ನಷ್ಟದ ಬಗ್ಗೆ ಚಿಂತಿಸದೆ ಸೇವಾ ನಿರತವಾಗಿರುವುದು ಶ್ಲಾಘನೀಯ ಎಂದರು.
ಫಾ.ಮುಲ್ಲರ್ಸ್‌ ಚಾರಿಟಬಲ್‌ ಟ್ರಸ್ಟ್‌ ನಿರ್ದೇಶಕ ವಂ.ಫಾ.ಫಾವೊಸ್ತಿನ್‌ ಲ್ಯೂಕಸ್‌ ಲೋಬೊ ಅವರು ಮಾತನಾಡುತ್ತಾ, ವಿದ್ಯಾರ್ಥಿಗಳು ದೈವಿಕ ಶಕ್ತಿಯ ಕರೆಯನ್ನು ಸ್ವೀಕರಿಸಿ ಆರೈಕೆ, ಚಿಕಿತ್ಸೆಯ ಕ್ಷೇತ್ರವನ್ನು ಪ್ರವೇಶಿಸುತ್ತಿದ್ದೀರಿ, ಇದು ಕೇವಲ ಜ್ಞಾನ ಮಾತ್ರವಲ್ಲದೆ ಅನುಭೂತಿ, ಮಾನವೀಯತೆ ಹಾಗೂ ನಂಬಿಕೆಯನ್ನೂ ಕೇಳುತ್ತದೆ ಎಂದು ನೆನಪಿಸಿದರು.
ವೈದ್ಯಕೀಯ ವೃತ್ತಿಗೆ ಹೊಸದಾಗಿ ಪಾದಾರ್ಪಣೆ ಮಾಡುವ ವಿದ್ಯಾರ್ಥಿಗಳ ಸೇರ್ಪಡೆಯನ್ನು ಸಂಕೇತಿಸುವ ವೈಟ್‌ ಕೋಟ್‌ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ ಘಟಕ ಮುಖ್ಯಸ್ಥ ಪ್ರೊ.ಡಾ.ನಾಗೇಶ್‌ ಕೆ ಅವರು ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಾರ್ಗಸೂಚಿಯಂತೆ ಪ್ರತಿಜ್ಞಾವಿಧಿ ಬೋಧಿಸಿದರು. ಮೊದಲಬಾರಿಗೆ ವೈದ್ಯರು ಧರಿಸುವ ವೈಟ್‌ ಕೋಟ್‌ ಧರಿಸುವ ಮೂಲಕ ವಿದ್ಯಾರ್ಥಿಗಳು ಹೆಮ್ಮೆ ವ್ಯಕ್ತಪಡಿಸಿ, ಆರೈಕೆ, ಚಿಕಿತ್ಸೆಯ ಪವಿತ್ರ ಜವಾಬ್ದಾರಿ ನಿರ್ವಹಿಸುವ ಪ್ರತಿಜ್ಞೆ ಸ್ವೀಕರಿಸಿದರು.
ಸಮಾರಂಭದ ಭಾಗವಾಗಿ ಫಾ.ಮುಲ್ಲರ್ಸ್‌ ಆಸ್ಪತ್ರೆಯ ಆಡಳಿತಾಧಿಕಾರಿ ಫಾ.ಜಾರ್ಜ್‌ ಜೀವನ್‌ ಸಿಕ್ವೇರ ಅವರು ಪ್ಲಾಸ್ಟಿಕ್‌ ಫ್ರೀ ಕ್ಯಾಂಪಸ್‌ ಅಭಿಯಾನಕ್ಕೆ ಚಾಲನೆ ನೀಡಿದರು.
ಫಾ.ಮುಲ್ಲರ್ಸ್‌ ಮೆಡಿಕಲ್‌ ಕಾಲೇಜು ಆಡಳಿತಾಧಿಕಾರಿ ವಂ.ಡಾ.ಮೈಕೇಲ್‌ ಸಾಂತುಮಯೊರ್‌ ಸ್ವಾಗತಿಸಿ, ವೈದ್ಯಕೀಯ ಕಾಲೇಜಿನ ಡೀನ್ ಡಾ.ಆಂಟನಿ ಸಿಲ್ವನ್‌ ಡಿʼಸೋಜ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು