1:19 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

Sports | ಕಾಟಿಪಳ್ಳ ಇನ್ಫೆಂಟ್ ಮೇರಿ ಶಾಲಾ ತಂಡಗಳು ವಿಭಾಗಮಟ್ಟಕ್ಕೆ ಆಯ್ಕೆ

11/10/2025, 20:36

ಮಂಗಳೂರು(reporterkarnataka.com): ಮಂಗಳೂರು ಉತ್ತರ ವಲಯದಲ್ಲಿ ಪ್ರಥಮ ಸ್ಥಾನಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಖೊಖೊ ಪಂದ್ಯಾಟಗಳಲ್ಲಿ ಭಾಗವಹಿಸಿದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಾಟಿಪಳ್ಳ ನೇತೃತ್ವದ ೧೪ ವರ್ಷ ವಯೋಮಿತಿಯೊಳಗಿನ ಹಾಗೂ ೧೭ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ನಾಲ್ಕೂ ವಿಭಾಗಗಳ ತಂಡಗಳು ಜಯಶಾಲಿಯಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಸಂಚಾಲಕರಾದ ಫಾ| ಸಂತೋಷ್ ಲೋಬೋ ತಿಳಿಸಿದ್ದಾರೆ.


ಮುಖ್ಯ ಶಿಕ್ಷಕರಾದ ಫ್ರಾನ್ಸಿಸ್ ಡಿಕೂನ್ಹಾರವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ವಿನ್ಯಾಸ್ ರವರು ತರಬೇತಿ ನೀಡಿದ್ದರು. ಜಿಲ್ಲಾ ಮಟ್ಟದ ಖೊಖೊ ಪಂದ್ಯಾಟಗಳು ಪುತ್ತೂರು ತಾಲೂಕಿನ ಶ್ರೀಗೋಪಾಲಕೃಷ್ಣ ಅನುದಾನಿತ ಪ್ರೌಢಶಾಲೆ, ಬಿಳಿನೆಲೆಯಲ್ಲಿ ಅಕ್ಟೋಬರ್ ೯ರಂದು ನಡೆದು ಈ ಪಂದ್ಯಾಟಗಳಲ್ಲಿ ಬೆಸ್ಟ್ ಆಲ್ ರೌಂಡರ್ ಆಗಿ ಶೈಲಿ, ಮಯೂರ್, ಕನ್ನಿಕಾ ಶೆಟ್ಟಿ ಮತ್ತು÷ಹಸನ್ ಸಾದ್ ಆಯ್ಕೆಯಾದರು. ಬೆಸ್ಟ್ ರನ್ನರ್ ಆಗಿ ಜಯಲಕ್ಷ್ಮಿ ಮತ್ತು ಜಾಹ್ನವಿ, ಬೆಸ್ಟ್ ಚೇಜರ್ ಆಗಿ ವರ್ಷಿತ್ ಜೆ ಶೆಟ್ಟಿ ಪುರಸ್ಕೃತರಾದರು. ಅಲ್ಲದೆ ಬಜ್ಪೆಯ ಸೈಂಟ್ ಜೋಸೆಫ್ ಪ್ರೌಢಶಾಲೆಯ ಅಫ್ರಾಜ್ ವೈಯುಕ್ತಿಕ ಪ್ರಶಸ್ತಿ ಪಡೆದರು. ಮೈಸೂರು ವಿಭಾಗ ಮಟ್ಟದ ಖೊಖೊ ಪಂದ್ಯಾಟಗಳು ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ೧೨ ಮತ್ತು ೧೩ ರಂದು ನಡೆಯಲಿದ್ದು ಈ ತಂಡಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿವೆ.

ಇತ್ತೀಚಿನ ಸುದ್ದಿ

ಜಾಹೀರಾತು