1:00 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

12/10/2025, 12:38

ಹಾಸನ(reporterkarnataka.com): ಈ ಬಾರಿ ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲಾಗಿತ್ತು. ವಿಐಪಿಗಳು ಬರುವ ಮೊದಲು ಕೆಲ ಅಧಿಕಾರಿಗಳಿಗೆ ಮುಂಚಿತವಾಗಿಯೇ ತಿಳಿಸಿ, ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿತ್ತು. ಈ ಮಧ್ಯೆ ಜನರಿಗೆ ಹಾಸನಾಂಬ ದರ್ಶನ ಪಡೆಯಲು ತಮ್ಮ ಗುರುತಿನ ಚೀಟಿಯನ್ನೇ ನೀಡಿದಂತ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, “ಜೀರೋ ಟಾಲರೆನ್ಸ್.” ಹಾಸನಾಂಬ ದೇವಾಲಯದ ಆವರಣಕ್ಕೆ ಅನಧಿಕೃತ ಜನರಿಗೆ ಪ್ರವೇಶ ನೀಡಲು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮೊದಲ ದಿನವೇ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇದು ನಮ್ಮ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದಿದ್ದಾರೆ.
ಸರ್ಕಾರಿ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಳ್ಳುವುದು ಗಂಭೀರ ಅಪರಾಧ. ಈ ಇಬ್ಬರು ಅಧಿಕಾರಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ಅನಧಿಕೃತ ಜನರಿಗೆ ನೀಡಿ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಿದ್ದರು.ಇಂತಹ ಕೃತ್ಯಗಳು ಸರ್ಕಾರಿ ನೌಕರರಿಗೆ ತಕ್ಕುದಾದದ್ದಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇದು ಕೇವಲ ಒಂದು ಪ್ರತ್ಯೇಕ ಘಟನೆ. ಈ ಘಟನೆ ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಸಾರ್ವಜನಿಕರಿಗೆ ಅತ್ಯುತ್ತಮ ದರ್ಶನ ವ್ಯವಸ್ಥೆಯನ್ನು ಖಾತ್ರಿಪಡಿಸುವಲ್ಲಿ ಅನುಕರಣೀಯ ಕೆಲಸ ಮಾಡಿದ್ದಾರೆ. ಇದು ಉತ್ತಮ ತಂಡದ ಕೆಲಸ. ಉತ್ತಮ ಕೆಲಸ ಮಾಡುತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಶ್ರೇಯಸ್ಸು ಸಲ್ಲಬೇಕು ಎಂಬುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು