1:13 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾರ್ಷಿಕೋತ್ಸವ ಸಂಭ್ರಮ

13/10/2025, 09:12

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ವಾರ್ಷಿಕೋತ್ಸವ ಅಕ್ಟೋಬರ್ 12 ರಂದು ರವಿವಾರ ವಿಜೃಂಭಣೆಯಿಂದ ನಡೆಯಿತು.
ಹಬ್ಬದ ಸಾಂಭ್ರಮಿಕ ಬಲಿ ಪೂಜೆಯ ನೇತೃತ್ವವನ್ನು ಮಂಗಳೂರು ಧರ್ಮ ಪ್ರಾಂತ್ಯದ ವಿಶ್ರಾಂತ ಬಿಷಪ್ ಅತಿ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿ ಸೋಜಾ ಅವರು ವಹಿಸಿ ವಾರ್ಷಿಕೋತ್ಸವದ ಶುಭಾಶಯಗಳನ್ನು ಸಲ್ಲಿಸಿದರು. ಚರ್ಚ್ ನ ಪೋಷಕಿ ಮದರ್ ತೆರೆಸಾ ಅವರ ಮೌಲ್ಯಾಧಾರಿತ ಜೀವನವನ್ನು ನೆನಪಿಸಿದ ಅವರು ಪ್ರತಿಯೊಬ್ಬ ಭಕ್ತರು ಕೂಡಾ ತಮ್ಮ ಜೀವನದಲ್ಲಿ ತೆರೆಸಾ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳ ಬೇಕೆಂದು ಹೇಳಿದರು.
ಪ್ರವಚನ ನೀಡಿದ ಜಪ್ಪು ಸೈಂಟ್ ಜೋಸೆಫ್ ಸೆಮಿನರಿಯ ಮಾಜಿ ರೆಕ್ಟರ್ ವಂದನೀಯ ಫಾ. ಡಾ. ರೊನಾಲ್ಡ್ ಸೆರಾವೋ ಅವರು ಬಡ ಬಗ್ಗರ ಮತ್ತು ನಿರ್ಗತಿಕರ ಸೇವೆ ಮಾಡಿದ ಸಂತ ತೆರೆಸಾ ಅವರ ಬದುಕು ನಮಗೆಲ್ಲ ಮಾದರಿಯಾಗಿದೆ. ಅಂತಹ ಪೋಷಕಿಯನ್ನು ಪಡೆದ ಪಾಲ್ದನೆ ಚರ್ಚ್ ನ ಭಕ್ತರು ಧನ್ಯರು ಎಂದು ಹೇಳಿದರು.
ಬಲಿ ಪೂಜೆಯಲ್ಲಿ ಮಂಗಳೂರು ಸಿಟಿ ವಲಯದ ಮುಖ್ಯಸ್ಥ ವಾಮಂಜೂರು ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಡಾ. ಜೇಮ್ಸ್ ಡಿ ಸೋಜಾ, ಅಂಜೆಲೋರ್ ಗಾರ್ಡಿಯನ್ ಏಂಜೆಲ್ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಫ್ರೆಡ್ರಿಕ್ ಮೊಂತೇರೊ, ಬಜ್ಜೋಡಿ ಇನ್ಫೆಂಟ್ ಮೇರಿ ಚರ್ಚ್ ನ ವಂದನೀಯ ಫಾ. ಮೆಲ್ವಿನ್ ಡಿ ಸೋಜಾ, ಜಪ್ಪು ಸೆಮಿನರಿಯ ವಂದನೀಯ ಫಾ
ಫೆಲಿಕ್ಸ್ ಮೊಂತೇರೊ, ಮಂಜೇಶ್ವರ ಚರ್ಚ್ ನ ಧರ್ಮ ಗುರು ವಂದನೀಯ ಫಾ. ವಿನ್ಸೆಂಟ್ ಸಲ್ಡಾನ್ಹಾ, ಪಾಲ್ದನೆ ಸಂತ ತೆರೆಸಾ ಚರ್ಚ್ ನ ಡೀಕೋನ್ ರೋವಿನ್ ಲೋಪೆಜ್ ಮತ್ತು ಇತರ ಗುರುಗಳು ಉಪಸ್ಥಿತರಿದ್ದರು. ಪಾಲ್ದನೆ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಬಲಿಪೂಜೆಯಲ್ಲಿ ಭಾಗವಹಿಸಿ ವಾರ್ಷಿಕೋತ್ಸವದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಆಧ್ಯಾತ್ಮಿಕ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್ , ಗಾಯನ ಮಂಡಳಿಯ ಅಧ್ಯಕ್ಷೆ ಲಿಝಿ ಫೆರ್ನಾಂಡಿಸ್ ಮತ್ತು ಇತರರು ಉಪಸ್ಥಿತರಿದ್ದರು. ಹಬ್ಬದ ಪಿರ್ಜೆಂತ್ ಫ್ರಾಂಕ್ ಫೆರ್ನಾಂಡಿಸ್ ಅವರನ್ನು ಎಂ.ಸಿ.ಸಿ. ಬ್ಯಾಂಕಿನ ಮಾಜಿ ಅಧ್ಯಕ್ಷ ಮೆಲ್ವಿನ್ ಡಿ ಕುನ್ಹಾ ಅವರೊಂದಿಗೆ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು