12:12 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆಗೆ

14/10/2025, 18:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇದೇ ಭಾನುವಾರ- ಸೋಮವಾರ ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸವ ಹಿನ್ನೆಲೆ ಭಕ್ತ ಸಾಗರ 5 ಕಿ.ಮೀ. ಬೆಟ್ಟ ಏರಲಿರುವ ಕಾರಣ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಪ್ರತಿ ವರ್ಷ 60-70 ಸಾವಿರಕ್ಕೂ ಹೆಚ್ಚು ಭಕ್ತರು ದೇವೀರಮ್ಮನ ದರ್ಶನಕ್ಕೆ ಬೆಟ್ಟ ಹತ್ತುತ್ತಾರೆ.
15 ವರ್ಷ ಮೇಲ್ಪಟ್ಟು 60 ವರ್ಷ ಒಳಗಿನವರು ಮಾತ್ರ ಬೆಟ್ಟ ಹತ್ತಬೇಕು. ಪ್ರವಾಸಿ ತಾಣ ಹಾಗೂ ಭಕ್ತರ ನಡುವೆ ಜನಸಂದಣಿ ತಡೆಗೆ ಜಿಲ್ಲಾಡಳಿತ ಕ್ರಮಕೈಗೊಂಡಿದೆ.
19ರ ಬೆಳಗ್ಗೆ 6 ಗಂಟೆಯಿಂದ 20ರ ಸಂಜೆ 6 ಗಂಟೆವರೆಗೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬರದಂತೆ ಮನವಿ ಮಾಡಲಾಗಿದೆ.
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ದತ್ತಪೀಠ, ಮಾಣಿಕ್ಯಾಧಾರಕ್ಕೆ ಪ್ರವಾಸಿಗರು ಬರದಂತೆ ಮನವಿ ಮಾಡಲಾಗಿದೆ‌.
ಹೋಂ ಸ್ಟೇ, ರೆಸಾರ್ಟ್ ಬುಕ್ ಮಾಡಿರುವವರಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.
ರಾಜ್ಯ ಹೆದ್ದಾರಿ ತರೀಕೆರೆ ಮಾರ್ಗವನ್ನ ಬಿಂಡಿಗ ದೇವೀರಮ್ಮನ ಭಕ್ತರಿಗೆ ಮೀಸಲಿಡಲಾಗಿದೆ.
ಅನ್ಯ ಕಾರ್ಯದ ನಿಮಿತ್ತ ಚಿಕ್ಕಮಗಳೂರಿಗೆ ಬರುವವರು ಕಡ್ಡಾಯವಾಗಿ ಕಡೂರು ಮಾರ್ಗದಲ್ಲಿ ಬರುವಂತೆ ಸೂಚನೆ ನೀಡಲಾಗಿದೆ.
ಭಕ್ತರಿಗೆ ವರ್ಷಕ್ಕೊಮ್ಮೆ ದರ್ಶನ ನೀಡುವ ಬೆಟ್ಟದ ಮೇಲಿರೋ ಬಿಂಡಿಗ ದೇವೀರಮ್ಮ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು