10:09 AM Thursday16 - October 2025
ಬ್ರೇಕಿಂಗ್ ನ್ಯೂಸ್
ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು…

ಇತ್ತೀಚಿನ ಸುದ್ದಿ

Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ

16/10/2025, 10:01

ಗಿರಿಧರ್ ಕೊಂಪುಳಿರ ಮಡಿಕೇರಿ

info.repoeterkarnatkaka@gmail.com

ತುಲಾ ಸಂಕ್ರಮಣ ಹಿನ್ನೆಲೆಯಲ್ಲಿ ಕಾವೇರಿ ಮಾತೆಗೆ ತೊಡಿಸಲು ಚಿನ್ನಾಭರಣಗಳನ್ನು ಭಾಗಮಂಡಲ ದೇವಾಲಯದಿಂದ ಬುಧವಾರ ಕೊಂಡೊಯ್ಯಲಾಯಿತು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಅವರಿಂದ ತಲಕಾವೇರಿ ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ ಪಡೆದರು. ಬಳಿಕ ದೇವಾಲಯದ ಸುತ್ತ ಚಂಡೆ ವಾದ್ಯಗೋಷ್ಠಿಯೊಂದಿಗೆ ಪ್ರದಕ್ಷಿಣೆ ಬರಲಾಯಿತು ನಂತರ ಚಿನ್ನಾಭರಣಗಳನ್ನು ತಲಕಾವೇರಿಗೆ ಕೊಂಡೊಯ್ದು ಕಾವೇರಿ ಮಾತಿಗೆ ತೊಡಿಸಲಾಯಿತು. ಒಂದು ತಿಂಗಳ ಕಾಲ ತಲಕಾವೇರಿ ತಕ್ಕರಾದ ಕೋಡಿ ಮೊಟ್ಟಯ್ಯ ಅವರ ಸುಪರ್ದಿಯಲ್ಲಿ ಈ ಚಿನ್ನಾಭರಣಗಳಿದ್ದು ಪ್ರತಿ ದಿನ ಮಾತಗೆ ತೊಡಿಸಿ ತುಲಾಮಾಸದಲ್ಲಿ ಕಾವೇರಿಮಾತೆ ಕಂಗೊಳಿಸಲಿದ್ದಾಳೆ.ಕಿರು ಸಂಕ್ರಮಣದ ಬಳಿಕ ಚಿನ್ನಾಭರಗಳನ್ನು ತಂದು ಆಡಳಿತಾಧಿಕಾರಿಗೆ ಒಪ್ಪಿಸಲಿದ್ದಾರೆ.


ಈ ಸಂದರ್ಭ ಆಡಳಿತಾಧಿಕಾರಿ ಚಂದ್ರಶೇಖರ್ ,ಪಾರುಪತ್ಯೆಗಾರ ಪೊಣ್ಣಣ್ಣ,ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ಕೊಡಗರ ಹರ್ಷ,ಕೊಡಗು ಗೌಡ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ ನಗರಸಭಾ ಸದಸ್ಯ ಶ್ವೇತಪ್ರಾಶತ್ ಕೊಡಗು ಗೌಡಯುವ ವೇದಿಕೆಯ ಸೋನಿಯಾ ಶರತ್ , ಕೊಡಗುಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯನಂದ, ದಂಬೆಕೊಡಿ ಆನಂದ,ಕುಟ್ಟನ ಸುದೀಪ್,ಪೈಕೆರ ಮನೋಹರ್, ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ಅಧ್ಯಕ್ಷ ಕುದುಕುಳಿ ಕಿಶೋರ್, ಕಾರ್ಯದರ್ಶಿ ಚಲನ್, ಭಾಗಮಂಡಲ ದೇವಸ್ಥಾನದ ನಾಡು ತಕ್ಕರಾದ ಬಾರಿಕೆ ಮತ್ತು ನಂಗಾರು ಕುಟುಂಬಸ್ಥರು, ದೇಶ ತಕ್ಕರಾದ ಕುದುಪಜೆಮತ್ತು ಸೂರ್ತಲೆ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು