5:41 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ

16/10/2025, 10:01

ಗಿರಿಧರ್ ಕೊಂಪುಳಿರ ಮಡಿಕೇರಿ

info.repoeterkarnatkaka@gmail.com

ತುಲಾ ಸಂಕ್ರಮಣ ಹಿನ್ನೆಲೆಯಲ್ಲಿ ಕಾವೇರಿ ಮಾತೆಗೆ ತೊಡಿಸಲು ಚಿನ್ನಾಭರಣಗಳನ್ನು ಭಾಗಮಂಡಲ ದೇವಾಲಯದಿಂದ ಬುಧವಾರ ಕೊಂಡೊಯ್ಯಲಾಯಿತು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಅವರಿಂದ ತಲಕಾವೇರಿ ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ ಪಡೆದರು. ಬಳಿಕ ದೇವಾಲಯದ ಸುತ್ತ ಚಂಡೆ ವಾದ್ಯಗೋಷ್ಠಿಯೊಂದಿಗೆ ಪ್ರದಕ್ಷಿಣೆ ಬರಲಾಯಿತು ನಂತರ ಚಿನ್ನಾಭರಣಗಳನ್ನು ತಲಕಾವೇರಿಗೆ ಕೊಂಡೊಯ್ದು ಕಾವೇರಿ ಮಾತಿಗೆ ತೊಡಿಸಲಾಯಿತು. ಒಂದು ತಿಂಗಳ ಕಾಲ ತಲಕಾವೇರಿ ತಕ್ಕರಾದ ಕೋಡಿ ಮೊಟ್ಟಯ್ಯ ಅವರ ಸುಪರ್ದಿಯಲ್ಲಿ ಈ ಚಿನ್ನಾಭರಣಗಳಿದ್ದು ಪ್ರತಿ ದಿನ ಮಾತಗೆ ತೊಡಿಸಿ ತುಲಾಮಾಸದಲ್ಲಿ ಕಾವೇರಿಮಾತೆ ಕಂಗೊಳಿಸಲಿದ್ದಾಳೆ.ಕಿರು ಸಂಕ್ರಮಣದ ಬಳಿಕ ಚಿನ್ನಾಭರಗಳನ್ನು ತಂದು ಆಡಳಿತಾಧಿಕಾರಿಗೆ ಒಪ್ಪಿಸಲಿದ್ದಾರೆ.


ಈ ಸಂದರ್ಭ ಆಡಳಿತಾಧಿಕಾರಿ ಚಂದ್ರಶೇಖರ್ ,ಪಾರುಪತ್ಯೆಗಾರ ಪೊಣ್ಣಣ್ಣ,ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ಕೊಡಗರ ಹರ್ಷ,ಕೊಡಗು ಗೌಡ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ ನಗರಸಭಾ ಸದಸ್ಯ ಶ್ವೇತಪ್ರಾಶತ್ ಕೊಡಗು ಗೌಡಯುವ ವೇದಿಕೆಯ ಸೋನಿಯಾ ಶರತ್ , ಕೊಡಗುಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯನಂದ, ದಂಬೆಕೊಡಿ ಆನಂದ,ಕುಟ್ಟನ ಸುದೀಪ್,ಪೈಕೆರ ಮನೋಹರ್, ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ಅಧ್ಯಕ್ಷ ಕುದುಕುಳಿ ಕಿಶೋರ್, ಕಾರ್ಯದರ್ಶಿ ಚಲನ್, ಭಾಗಮಂಡಲ ದೇವಸ್ಥಾನದ ನಾಡು ತಕ್ಕರಾದ ಬಾರಿಕೆ ಮತ್ತು ನಂಗಾರು ಕುಟುಂಬಸ್ಥರು, ದೇಶ ತಕ್ಕರಾದ ಕುದುಪಜೆಮತ್ತು ಸೂರ್ತಲೆ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು