4:58 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

16/10/2025, 10:07

ಬೆಂಗಳೂರು(reporterkarnataka.com): ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರʼ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಕುಶಲ ಕೆಲಸಕ್ಕೆ ಬೇಡಿಕೆ ಸಲ್ಲಿಸುವ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ವರ್ಷದಲ್ಲಿ 100 ದಿನಗಳ ಅಕುಶಲ ಕೆಲಸ ಖಾತ್ರಿ ಪಡಿಸುತ್ತದೆ. ಕೂಲಿಕಾರರಿಗೆ ಸಕಾಲದಲ್ಲಿ ಅಕುಶಲ ಕೆಲಸ ಒದಗಿಸುವುದರೊಂದಿಗೆ ಬಹುಬಾಳಿಕೆ ಆಸ್ತಿಗಳನ್ನು ಸೃಜಿಸಲಾಗುತ್ತದೆ. ಹೀಗೆ ಸೃಜಿಸುವ ಆಸ್ತಿಗಳನ್ನು ಪ್ರತಿ ವರ್ಷ ಅಕ್ಟೋಬರ್‌ ಮಾಹೆಯಿಂದ ನವೆಂಬರ್‌ ಮಾಹೆವರೆಗೆ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಕಾರ್ಮಿಕ ಆಯವ್ಯಯವನ್ನು ಸಿದ್ಧಪಡಿಸಲಾಗುತ್ತಿತ್ತು. ಈ ಬಾರಿ 2026-27ನೆ ಆರ್ಥಿಕ ಸಾಲಿನ ಕಾರ್ಮಿಕ ಆಯವ್ಯಯವನ್ನು ವೈಜ್ಞಾನಿಕವಾಗಿ ಸಿದ್ದಪಡಿಸಲು ʼಯುಕ್ತಧಾರʼ ತಂತ್ರಾಂಶವನ್ನು ಜಾರಿಗೊಳಿಸಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಪರೀಕ್ಷಾರ್ಥ ತಾಲ್ಲೂಕಿಗೊಂದು ಗ್ರಾಮ ಪಂಚಾಯತಿಯಲ್ಲಿ ಈಗಾಗಲೆ ತಂತ್ರಾಂಶದಡಿ ಆಯವ್ಯಯವನ್ನು ಸಿದ್ದಪಡಿಸಲಾಗಿತ್ತು, ಕಾರ್ಮಿಕ ಆಯವ್ಯಯವನ್ನು ಸಿದ್ದಪಡಿಸಲು ಎಲ್ಲಾ ಗ್ರಾಮಪಂಚಾಯಿತಿಗಳಿಗೂ ಈ ತಂತ್ರಾಂಶ ಸೌಲಭ್ಯವನ್ನು ವಿಸ್ತರಿಸಲಾಗಿದ್ದು ಈ ತಂತ್ರಾಂಶದ ಮೂಲಕವೇ ಮುಂದಿನ ಆಯವ್ಯಯ ಸಿದ್ದಪಡಿಸಬೇಕಿದೆ ಎಂದು ತಿಳಿಸಿರುವ ಸಚಿವರು ಈಗಾಗಲೇ ಅನುಷ್ಠಾನ ಅಧಿಕಾರಿಗಳಿಗೆ ತಾಂತ್ರಿಕ ತರಬೇತಿ ನೀಡಲಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ “ಯುಕ್ತಧಾರ” ಮೂಲಕ ಸಿದ್ದಪಡಿಸಲಾದ ಕಾರ್ಮಿಕ ಆಯವ್ಯಯವನ್ನು ಗ್ರಾಮ ಸಭೆಯಲ್ಲಿ ಸಿದ್ಧಪಡಿಸಲು ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ ಎಂದೂ ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು