4:23 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

16/10/2025, 14:10

ಮಂಗಳೂರು(reporterkarnataka.com): ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ(65) ಅವರು ಅರಶಿಣಮಕ್ಕಿಯ ಮನೆಯಲ್ಲಿ ವಿಧಿವಶರಾಗಿದ್ದಾರೆ.
ಯಕ್ಷಗಾನದ ಅಗ್ರಮಾನ್ಯ ಭಾಗವತರಲ್ಲಿ ಅವರು ಒಬ್ಬರಾಗಿದ್ದರು. ತನ್ನ ಕಂಠಸಿರಿಯಿಂದ ಅಪಾರ ಅಭಿಮಾನಿಗಳ ಮನಸ್ಸಿನಲ್ಲಿ ಮನೆಮಾಡಿದ ಅವರು ಭ್ರಾಮರೀ ಯಕ್ಷವೈಭವದ ಹಲವಾರು ಯಕ್ಷಗಾನಕ್ಕೆ ಭಾಗವತಿಕೆ ಮಾಡಿ ಆ ಪ್ರಸಂಗದ ಯಶಸ್ವಿಗೆ ಕಾರಣಕರ್ತರಾಗಿದ್ದರು. ರಸರಾಗ ಚಕ್ರವರ್ತಿ, ಗಾನಕೋಗಿಲೆ ಎಂದೇ ದಿನೇಶ್ ಅಮ್ಮಣ್ಣಾಯ ಪ್ರಸಿದ್ದರಾಗಿದ್ದರು.
ಪ್ರಸಿದ್ಧ ಭಾಗವತರಾದ ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿದ್ದರು. ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು ಆಗಿದೆ. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಅತ್ಯದ್ಭುತ ರಾಗ ಸಂಚಾರದ ಮೂಲಕ ಕರುಣಾ ರಸದ ಪದ್ಯಗಳಿಗೆ ಸಾಟಿಯಿಲ್ಲದ ಭಾಗವತ ಎನಿಸಿಕೊಂಡಿದ್ದರು. ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ವಿಶ್ರಾಂತ ಜೀವನ ನಡೆಸುತ್ತಿದ್ದ ಅಮ್ಮಣ್ಣಾಯರು ಭಾಗವತರಾಗಿ ಅನೇಕ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅಮ್ಮಣ್ಣಾಯರ ಅಗಲುವಿಕೆಗೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು