3:28 PM Sunday7 - December 2025
ಬ್ರೇಕಿಂಗ್ ನ್ಯೂಸ್
Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ…

ಇತ್ತೀಚಿನ ಸುದ್ದಿ

Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ ರೈತನ ಚಿಕಿತ್ಸೆಗೆ ಸರ್ಕಾರದ ವೆಚ್ಚ

17/10/2025, 19:32

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರಿನ ಹೆಚ್.ಡಿ. ಕೋಟೆಯ ಬಡಗಲಾಪುರದಲ್ಲಿ ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಮಹದೇವಗೌಡ ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಅಲ್ಲದೇ, ಈಗಾಗಲೇ ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ
ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕಿತ್ಸೆ ಪಡೆಯುತ್ತಿರುವ ಮಹದೇವಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ, ಈ ಸಮಯದಲ್ಲಿ ಮಹದೇವಗೌಡ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ. ಅದರ ಜೊತೆಗೆ ಪರಿಹಾರದ ಮೊತ್ತವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಲು ಸಿಎಂ ಸೂಚನೆ‌ ಕೊಟ್ಟಿದ್ದಾರೆ.

*ದೃಷ್ಟಿ ಮರಳಿ ಬರುವ ಸಾಧ್ಯತೆ ಇಲ್ಲ:* ಇನ್ನು ಎರಡು ಕಣ್ಣುಗಳ ದೃಷ್ಟಿ ಮತ್ತೆ ಬರುವ ಸಾಧ್ಯತೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪರಿಹಾರವನ್ನು ಗಾಯಾಳು ಲೆಕ್ಕದಲ್ಲಿ ಕೊಡಬಾರದು. ಬದುಕು ಕಳೆದುಕೊಂಡ, ಕುಟುಂಬದ ಆಸರೆ ಕಳೆದುಕೊಂಡವರ ಲೆಕ್ಕದಲ್ಲಿ ಪೂರ್ತಿ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

*ಏನಿದು ಪ್ರಕರಣ?:*
ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಹುಲಿ ಸೆರೆಗೆಂದು ಕೂಂಬಿಂಗ್ ನಡೆಸುತ್ತಿದ್ದಾಗ ಹತ್ತಿರದಲ್ಲೇ ಹತ್ತಿ ಬಿಡಿಸುತ್ತಿದ್ದ ರೈತನ ಮೇಲೆ ವ್ಯಾಘ್ರ ಅಟ್ಯಾಕ್‌ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿತ್ತು. ಈ ತೀವ್ರ ದಾಳಿಯಿಂದಾಗಿ ರೈತನ ಮುಖ ಛಿದ್ರಛಿದ್ರವಾಗಿದೆ.
ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಡಗಲಪುರದಲ್ಲಿ ನಡೆದಿದೆ. ಮೈಸೂರು ದಸರಾದ ಜನಪ್ರಿಯ ಆನೆ ಭೀಮನನ್ನು ಬಳಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ದುರ್ಘಟನೆ ನಡೆದಿತ್ತು. ಅಲ್ಲೇ ಹತ್ತಿರದ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ರೈತ ಮಾದೇಗೌಡನ ಮೇಲೆ ವ್ಯಾಘ್ರ ಎರಗಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಮೈಸೂರಿಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ನುಗು ವನ್ಯಜೀವಿ ವಲಯದ ಅರಣ್ಯ ಪ್ರದೇಶದ ಕಾಡಂಚಿನ ಗ್ರಾಮಗಳಲ್ಲಿ ಕಳೆದ ವಾರದಿಂದ ಹುಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಇದರಿಂದಾಗಿ ಗ್ರಾಮಸ್ಥರು ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅರಣ್ಯ ಇಲಾಖೆ 4-5 ದಿನಗಳಿಂದ ಹುಲಿ ಸೆರೆಗಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿತ್ತು. ಇದಲ್ಲದೆ ಬೋನ್ ಇರಿಸಿತ್ತು.
ಗುರುವಾರ ಮತ್ತೆ ಕೂಂಬಿಂಗ್ ಕಾರ್ಯಾಚರಣೆ ನಡೆಸುವಾಗ ಹುಲಿಯು ಗ್ರಾಮದ ಬೋಳೆಗೌಡನಕಟ್ಟೆ ಕೆರೆ ಬಳಿ ಅವಿತು ಕುಳಿತಿತ್ತು. ಇದನ್ನು ಕಂಡ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಬಳಿ ಯಾರು ಹೋಗದಂತೆ ಎಚ್ಚರಿಕೆ ನೀಡಿದ್ದರು. ಆದರೆ ಹುಲಿ ಗಾಬರಿಗೊಂಡು ಕುಮಾರ್ ಎಂಬುವರ ತೋಟದ ಕಡೆಗೆ ಓಡಿದೆ. ನಂತರ ಅಲ್ಲಿಂದ ನುಗು ಅರಣ್ಯದ ಕಡೆಗೆ ಓಡಿ ಹೋಗಿ ಪೊದೆಯಲ್ಲಿ ಅವಿತು ಕುಳಿತಿತ್ತು.
ಹುಲಿ ಸೆರೆಗೆ ಸಾಕಾನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾಗ ಹೆದರಿ ಪೊದೆಯಿಂದ ಆಚೆ ಬಂದ ಹುಲಿ ಕಾಡಿನತ್ತ ಓಡಿದೆ. ಆಗ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹದೇವ್ ಅವರ ಮೇಲೆ ದಾಳಿ ಮಾಡಿದೆ. ಮಹದೇವ್‌ ಅವರ ಮುಖ, ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ತೀವ್ರ ರಕ್ತಸ್ರಾವದಿಂದ ಅಲ್ಲೇ ಕುಸಿದು ಬಿದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು