12:02 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ

18/10/2025, 20:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆಯ ಕಾರ್ಮಿಕ ಇಲಾಖೆಯಲ್ಲಿ ತಾನು ಸೀನಿಯರ್ ಲೇಬರ್ ಇನ್ಸ್ಪೆಕ್ಟರ್ ಎಂದು ಶಿವರಾಜು ಎನ್ನುವ ವ್ಯಕ್ತಿ ಮೊಬೈಲ್ ಸಂಖ್ಯೆ 8150816922 ಇಂದ ಗೋಣಿಕೊಪ್ಪದ ಉದ್ಯಮಿ ಚಂದನ್ ಕಾಮತ್ ರವರಿಗೆ ಕರೆ ಮಾಡಿ, ತಮ್ಮ ಸಂಸ್ಥೆಯ ಕಾರ್ಮಿಕ ಲೈಸನ್ಸ್ ನ ಬಾಬ್ತು ₹11350/- ಈ ಕೂಡಲೇ ಫೋನ್ ಪೇ ಮುಖಾಂತರ ಕಳುಹಿಸಿಕೊಡಬೇಕೆಂದು ಕೇಳಿರುತ್ತಾರೆ.
ಚಂದನ್ ರವರು ಫೋನ್ ಪೇ ಮಾಡಲಾಗುವುದಿಲ್ಲ, ತಾನು ವಿರಾಜಪೇಟೆ ಕಚೇರಿಗೆ ಬಂದು ಬಾಬ್ತನ್ನು ಕಟ್ಟುತೆನೆಂದು ಹೇಳಿ ವಿರಾಜಪೇಟೆಗೆ ತೆರಳುತ್ತಾರೆ.
ಕಾವೇರಿ ಸಂಕ್ರಮಣದ ಪ್ರಯುಕ್ತ ವಿರಾಜಪೇಟೆ ಕಾರ್ಮಿಕ ಕಚೇರಿ ರಜೆಯಿದ್ದು, ಶಿವರಾಜು ಎಂಬ ವ್ಯಕ್ತಿಯನ್ನು ಕರೆ ಮಾಡಿದರೆ ಆತ ಸಂಪರ್ಕಕ್ಕೆ ಸಿಗಲಿಲ್ಲ.
ನಂತರ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸ್ನೇಹಿತರಾದ ವಿರಾಜಪೇಟೆ ಗಾಯತ್ರಿ ಭವನ ಹೋಟೆಲಿನ ಮಾಲೀಕರಾದ ಮುರಳಿ ಶೆಣೈ ಹಾಗೂ ಶಬರೀಶ್ ರವರು ಕಾರ್ಮಿಕ ಇಲಾಖೆಯ ಅಧಿಕಾರಿಯಾದ ನವೀನ್ ರವರನ್ನು ವಿಚಾರಿಸಿದ ವೇಳೆ ಶಿವರಾಜು ಅನ್ನುವಂತಹ ಯಾವುದೇ ವ್ಯಕ್ತಿ ಇಲಾಖೆಯಲ್ಲಿ ಹುದ್ದೆಯಲ್ಲಿ ಇಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಇದೇ ರೀತಿ ಈ ವಂಚಕ ಇನ್ನಷ್ಟು ವಂಚನೆ ಮಾಡಬಹುದು ಎಂಬ ಉದ್ದೇಶದಿಂದ ಚಂದನ್ ಕಾಮತ್
ಮಡಿಕೇರಿಯ ಸೈಬರ್ ಪೊಲೀಸ್ ಸ್ಟೇಷನ್ ನಲ್ಲಿ ಈ ನಕಲಿ ವ್ಯಕ್ತಿಯ ಮೇಲೆ ಪುಕಾರು ನೀಡಿದ್ದಾರೆ.
ಸಾರ್ವಜನಿಕರು ಇಂತಹ ನಕಲಿ ಅಧಿಕಾರಿ ವಸೂಲಿ ಮಾಡಲು ಪ್ರಯತ್ನಿಸುವ ದುಷ್ಕರ್ಮಿಗಳ ಬಗ್ಗೆ ಎಚ್ಚರ ವಹಿಸಬೇಕು, ಸಂಶಯ ಕಂಡು ಬಂದಲ್ಲಿ ದೂರು ನೀಡುವಂತೆ ಕಾರ್ಮಿಕ ಇಲಾಖೆಯವರು ಹಾಗೂ ಸೈಬರ್ ಪೊಲೀಸ್ ಇಲಾಖೆಯವರು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು