12:08 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ

18/10/2025, 20:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆಯ ಕಾರ್ಮಿಕ ಇಲಾಖೆಯಲ್ಲಿ ತಾನು ಸೀನಿಯರ್ ಲೇಬರ್ ಇನ್ಸ್ಪೆಕ್ಟರ್ ಎಂದು ಶಿವರಾಜು ಎನ್ನುವ ವ್ಯಕ್ತಿ ಮೊಬೈಲ್ ಸಂಖ್ಯೆ 8150816922 ಇಂದ ಗೋಣಿಕೊಪ್ಪದ ಉದ್ಯಮಿ ಚಂದನ್ ಕಾಮತ್ ರವರಿಗೆ ಕರೆ ಮಾಡಿ, ತಮ್ಮ ಸಂಸ್ಥೆಯ ಕಾರ್ಮಿಕ ಲೈಸನ್ಸ್ ನ ಬಾಬ್ತು ₹11350/- ಈ ಕೂಡಲೇ ಫೋನ್ ಪೇ ಮುಖಾಂತರ ಕಳುಹಿಸಿಕೊಡಬೇಕೆಂದು ಕೇಳಿರುತ್ತಾರೆ.
ಚಂದನ್ ರವರು ಫೋನ್ ಪೇ ಮಾಡಲಾಗುವುದಿಲ್ಲ, ತಾನು ವಿರಾಜಪೇಟೆ ಕಚೇರಿಗೆ ಬಂದು ಬಾಬ್ತನ್ನು ಕಟ್ಟುತೆನೆಂದು ಹೇಳಿ ವಿರಾಜಪೇಟೆಗೆ ತೆರಳುತ್ತಾರೆ.
ಕಾವೇರಿ ಸಂಕ್ರಮಣದ ಪ್ರಯುಕ್ತ ವಿರಾಜಪೇಟೆ ಕಾರ್ಮಿಕ ಕಚೇರಿ ರಜೆಯಿದ್ದು, ಶಿವರಾಜು ಎಂಬ ವ್ಯಕ್ತಿಯನ್ನು ಕರೆ ಮಾಡಿದರೆ ಆತ ಸಂಪರ್ಕಕ್ಕೆ ಸಿಗಲಿಲ್ಲ.
ನಂತರ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸ್ನೇಹಿತರಾದ ವಿರಾಜಪೇಟೆ ಗಾಯತ್ರಿ ಭವನ ಹೋಟೆಲಿನ ಮಾಲೀಕರಾದ ಮುರಳಿ ಶೆಣೈ ಹಾಗೂ ಶಬರೀಶ್ ರವರು ಕಾರ್ಮಿಕ ಇಲಾಖೆಯ ಅಧಿಕಾರಿಯಾದ ನವೀನ್ ರವರನ್ನು ವಿಚಾರಿಸಿದ ವೇಳೆ ಶಿವರಾಜು ಅನ್ನುವಂತಹ ಯಾವುದೇ ವ್ಯಕ್ತಿ ಇಲಾಖೆಯಲ್ಲಿ ಹುದ್ದೆಯಲ್ಲಿ ಇಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಇದೇ ರೀತಿ ಈ ವಂಚಕ ಇನ್ನಷ್ಟು ವಂಚನೆ ಮಾಡಬಹುದು ಎಂಬ ಉದ್ದೇಶದಿಂದ ಚಂದನ್ ಕಾಮತ್
ಮಡಿಕೇರಿಯ ಸೈಬರ್ ಪೊಲೀಸ್ ಸ್ಟೇಷನ್ ನಲ್ಲಿ ಈ ನಕಲಿ ವ್ಯಕ್ತಿಯ ಮೇಲೆ ಪುಕಾರು ನೀಡಿದ್ದಾರೆ.
ಸಾರ್ವಜನಿಕರು ಇಂತಹ ನಕಲಿ ಅಧಿಕಾರಿ ವಸೂಲಿ ಮಾಡಲು ಪ್ರಯತ್ನಿಸುವ ದುಷ್ಕರ್ಮಿಗಳ ಬಗ್ಗೆ ಎಚ್ಚರ ವಹಿಸಬೇಕು, ಸಂಶಯ ಕಂಡು ಬಂದಲ್ಲಿ ದೂರು ನೀಡುವಂತೆ ಕಾರ್ಮಿಕ ಇಲಾಖೆಯವರು ಹಾಗೂ ಸೈಬರ್ ಪೊಲೀಸ್ ಇಲಾಖೆಯವರು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು