1:35 PM Sunday19 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಬಿಲ್ಲವರು, ಮೊಗವೀರರು ಪಕ್ಷ ಬೇಧ ಮರೆತು ಒಂದಾಗಬೇಕು; ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬ ಬೇಕು: ಮೊಗವೀರ ರತ್ನ, ನಾಡೋಜ ಡಾ.ಜಿ.ಶಂಕರ್

19/10/2025, 13:35

ಮಂಗಳೂರು(reporterkarnataka.com): ಮಂಗಳೂರು ದಸರಾ ಗೌರವ ಸಮ್ಮಾನ್ 2025 ಪ್ರಶಸ್ತಿ ಸ್ವೀಕರಿಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ಹಿಂದುಳಿದ ವರ್ಗಗಳ ನಾಯಕ ಮೊಗವೀರ ರತ್ನ ನಾಡೋಜ ಡಾ. ಜಿ. ಶಂಕರ್ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ವಂದಿಸಿ ಕ್ಷೇತ್ರದ ದೇವರ ದರ್ಶನ ಮಾಡಿದರು.

ಬಿಲ್ಲವರು ಮತ್ತು ಮೊಗವೀರ ಸಮಾಜ ರಾಜಕೀಯ ರಹಿತವಾಗಿ ಒಂದಾಗಬೇಕು. ಬಿಲ್ಲವ ಸಮಾಜ ಮತ್ತು ಮೊಗವೀರ ಸಮಾಜದ ನಡುವೆ ರಾಜಕೀಯ ಪ್ರಜ್ಞೆಯ ಕೊರತೆಯಿಂದ ಬಿಲ್ಲವ ಸಮಾಜದ ಅಭ್ಯರ್ಥಿಗಳು ಚುನಾವಣೆ ನಿಂತಾಗ ಮೊಗವೀರ ಸಮಾಜ ಸ್ಪಂದಿಸಲಿಲ್ಲ. ಅದೇ ರೀತಿ ಮೊಗವೀರ ಸಮಾಜ ಚುನಾವಣೆಗೆ ನಿಂತಾಗ ಬಿಲ್ಲವ ಸಮಾಜ ಸ್ಪಂದಿಸಲಿಲ್ಲ, ಇದರಿಂದಾಗಿ ಬಿಲ್ಲವ ಸಮಾಜಕ್ಕೆ ಮತ್ತು ಮೊಗವೀರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಇಲ್ಲದೆ ಸಮಾಜದ ಅಭಿವೃದ್ಧಿಗೆ ತೊಂದರೆ ಆಗುತ್ತದೆ. ಮಂಗಳೂರು ಲೋಕಸಭಾ ಅಭ್ಯರ್ಥಿ ಉದಯೋನ್ಮುಖ ಪದ್ಮರಾಜ್ ಆರ್ ಪೂಜಾರಿ ಗೆಲ್ಲ ಬೇಕಿತ್ತು. ಬಿಲ್ಲವ ಸಮಾಜಕ್ಕೆ ಆದ ನಷ್ಟ. ಮುಂದಿನ ದಿನಗಳಲ್ಲಿ ಬಿಲ್ಲವ ಮತ್ತು ಮೊಗವೀರ ಸಮಾಜದ ವ್ಯಕ್ತಿಗಳು ಯಾವುದೇ ಪಕ್ಷದಲ್ಲಿ ನಿಂತರೂ ನಾವು ಪಕ್ಷ ಭೇಧ ಮರೆತು ಒಂದಾಗ ಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು