2:00 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬಿಲ್ಲವರು, ಮೊಗವೀರರು ಪಕ್ಷ ಬೇಧ ಮರೆತು ಒಂದಾಗಬೇಕು; ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬ ಬೇಕು: ಮೊಗವೀರ ರತ್ನ, ನಾಡೋಜ ಡಾ.ಜಿ.ಶಂಕರ್

19/10/2025, 13:35

ಮಂಗಳೂರು(reporterkarnataka.com): ಮಂಗಳೂರು ದಸರಾ ಗೌರವ ಸಮ್ಮಾನ್ 2025 ಪ್ರಶಸ್ತಿ ಸ್ವೀಕರಿಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ಹಿಂದುಳಿದ ವರ್ಗಗಳ ನಾಯಕ ಮೊಗವೀರ ರತ್ನ ನಾಡೋಜ ಡಾ. ಜಿ. ಶಂಕರ್ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ವಂದಿಸಿ ಕ್ಷೇತ್ರದ ದೇವರ ದರ್ಶನ ಮಾಡಿದರು.

ಬಿಲ್ಲವರು ಮತ್ತು ಮೊಗವೀರ ಸಮಾಜ ರಾಜಕೀಯ ರಹಿತವಾಗಿ ಒಂದಾಗಬೇಕು. ಬಿಲ್ಲವ ಸಮಾಜ ಮತ್ತು ಮೊಗವೀರ ಸಮಾಜದ ನಡುವೆ ರಾಜಕೀಯ ಪ್ರಜ್ಞೆಯ ಕೊರತೆಯಿಂದ ಬಿಲ್ಲವ ಸಮಾಜದ ಅಭ್ಯರ್ಥಿಗಳು ಚುನಾವಣೆ ನಿಂತಾಗ ಮೊಗವೀರ ಸಮಾಜ ಸ್ಪಂದಿಸಲಿಲ್ಲ. ಅದೇ ರೀತಿ ಮೊಗವೀರ ಸಮಾಜ ಚುನಾವಣೆಗೆ ನಿಂತಾಗ ಬಿಲ್ಲವ ಸಮಾಜ ಸ್ಪಂದಿಸಲಿಲ್ಲ, ಇದರಿಂದಾಗಿ ಬಿಲ್ಲವ ಸಮಾಜಕ್ಕೆ ಮತ್ತು ಮೊಗವೀರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಇಲ್ಲದೆ ಸಮಾಜದ ಅಭಿವೃದ್ಧಿಗೆ ತೊಂದರೆ ಆಗುತ್ತದೆ. ಮಂಗಳೂರು ಲೋಕಸಭಾ ಅಭ್ಯರ್ಥಿ ಉದಯೋನ್ಮುಖ ಪದ್ಮರಾಜ್ ಆರ್ ಪೂಜಾರಿ ಗೆಲ್ಲ ಬೇಕಿತ್ತು. ಬಿಲ್ಲವ ಸಮಾಜಕ್ಕೆ ಆದ ನಷ್ಟ. ಮುಂದಿನ ದಿನಗಳಲ್ಲಿ ಬಿಲ್ಲವ ಮತ್ತು ಮೊಗವೀರ ಸಮಾಜದ ವ್ಯಕ್ತಿಗಳು ಯಾವುದೇ ಪಕ್ಷದಲ್ಲಿ ನಿಂತರೂ ನಾವು ಪಕ್ಷ ಭೇಧ ಮರೆತು ಒಂದಾಗ ಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು