12:01 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

53ನೇ ಬಜಾಲ್ ವಾರ್ಡ್: 1 ಕೋಟಿ ವೆಚ್ಚದ 15ಕ್ಕೂ ಹೆಚ್ಚು ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿಪೂಜೆ

19/10/2025, 21:01

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನಲ್ಲಿ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಡೆಯಲಿರುವ 15ಕ್ಕೂ ಹೆಚ್ಚು ಕಾಮಗಾರಿಗಳ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.
ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬಹುಕಾಲದ ಬೇಡಿಕೆಯಂತೆ ಅತೀ ಅಗತ್ಯವಿರುವ ರಸ್ತೆ ಕಾಂಕ್ರೀಟೀಕರಣ, ತಡೆಗೋಡೆ ನಿರ್ಮಾಣ, ಕಾಲುದಾರಿ, ಆರ್.ಸಿ.ಸಿ ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅನುದಾನವನ್ನು ಹೊಂದಿಸಿಕೊಂಡು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಆದರೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅದಕ್ಕೆ ತಡೆ ನೀಡಿತ್ತು. ಈ ಬಗ್ಗೆ ನಿರಂತರವಾಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಇಲ್ಲಿ ನಡೆಯಬೇಕಿರುವ ತುರ್ತು ಕಾಮಗಾರಿಯ ಬಗ್ಗೆ ಮನವರಿಕೆ ಮಾಡಿದ ಪರಿಣಾಮ ಇದೀಗ ಮತ್ತೆ ಹಿಂದಿನ ಬಿಜೆಪಿ ಸರ್ಕಾರದ ಕಾಮಗಾರಿಗೆ ಚಾಲನೆ ದೊರೆತಿದೆ ಎಂದರು.

ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿಗೆ ಯಾವುದೇ ಅನುದಾನ ದೊರೆಯುತ್ತಿಲ್ಲವಾಗಿದ್ದು, ಕ್ಷೇತ್ರದ ಇತರೆಡೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಅದಾಗ್ಯೂ ಈ ಬಗ್ಗೆ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಲಾಗುವುದು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಶಾಸಕರು ಹೇಳಿದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಪೂಜಾರಿ, ಪ್ರವೀಣ್ ನಿಡ್ಡೇಲ್, ಅಶ್ವಿತ್ ಕೊಟ್ಟಾರಿ, ರಾಮ್ ಪ್ರಸಾದ್, ವರುಣ್ ಅಂಬಟ್, ಭಾಸ್ಕರ ಚಂದ್ರ ಶೆಟ್ಟಿ, ಗಣೇಶ್, ಚಂದ್ರಶೇಖರ್, ಶಿವಾಜಿ ರಾವ್, ಹರಿ ಕೇಶವ, ಸುರೇಶ್ ರಾವ್, ವಿಜಯ, ಅಮರ್ ಶೆಟ್ಟಿ, ಚಂದ್ರ, ಅಜಿತ್ ಪಾಟೀಲ್, ಯೋಗೀಶ್, ಜಗದೀಶ್, ರೋಹಿಣಿ, ಲೋಲಾಕ್ಷಿ, ಕವಿತಾ, ಲಕ್ಷ್ಮಿ ನಾರಾಯಣ, ಯಾದವ ಗಾಣದಬೆಟ್ಟು, ಗಂಗಾಧರ್, ಸೀತಾರಾಮ್, ಕಮಲಾಕ್ಷ, ಶೋಭಾ ಪಲ್ಲಕೆರೆ, ಯಮುನಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು