9:24 PM Sunday19 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

53ನೇ ಬಜಾಲ್ ವಾರ್ಡ್: 1 ಕೋಟಿ ವೆಚ್ಚದ 15ಕ್ಕೂ ಹೆಚ್ಚು ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿಪೂಜೆ

19/10/2025, 21:01

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನಲ್ಲಿ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಡೆಯಲಿರುವ 15ಕ್ಕೂ ಹೆಚ್ಚು ಕಾಮಗಾರಿಗಳ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.
ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬಹುಕಾಲದ ಬೇಡಿಕೆಯಂತೆ ಅತೀ ಅಗತ್ಯವಿರುವ ರಸ್ತೆ ಕಾಂಕ್ರೀಟೀಕರಣ, ತಡೆಗೋಡೆ ನಿರ್ಮಾಣ, ಕಾಲುದಾರಿ, ಆರ್.ಸಿ.ಸಿ ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅನುದಾನವನ್ನು ಹೊಂದಿಸಿಕೊಂಡು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಆದರೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅದಕ್ಕೆ ತಡೆ ನೀಡಿತ್ತು. ಈ ಬಗ್ಗೆ ನಿರಂತರವಾಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಇಲ್ಲಿ ನಡೆಯಬೇಕಿರುವ ತುರ್ತು ಕಾಮಗಾರಿಯ ಬಗ್ಗೆ ಮನವರಿಕೆ ಮಾಡಿದ ಪರಿಣಾಮ ಇದೀಗ ಮತ್ತೆ ಹಿಂದಿನ ಬಿಜೆಪಿ ಸರ್ಕಾರದ ಕಾಮಗಾರಿಗೆ ಚಾಲನೆ ದೊರೆತಿದೆ ಎಂದರು.

ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿಗೆ ಯಾವುದೇ ಅನುದಾನ ದೊರೆಯುತ್ತಿಲ್ಲವಾಗಿದ್ದು, ಕ್ಷೇತ್ರದ ಇತರೆಡೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಅದಾಗ್ಯೂ ಈ ಬಗ್ಗೆ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಲಾಗುವುದು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಶಾಸಕರು ಹೇಳಿದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಪೂಜಾರಿ, ಪ್ರವೀಣ್ ನಿಡ್ಡೇಲ್, ಅಶ್ವಿತ್ ಕೊಟ್ಟಾರಿ, ರಾಮ್ ಪ್ರಸಾದ್, ವರುಣ್ ಅಂಬಟ್, ಭಾಸ್ಕರ ಚಂದ್ರ ಶೆಟ್ಟಿ, ಗಣೇಶ್, ಚಂದ್ರಶೇಖರ್, ಶಿವಾಜಿ ರಾವ್, ಹರಿ ಕೇಶವ, ಸುರೇಶ್ ರಾವ್, ವಿಜಯ, ಅಮರ್ ಶೆಟ್ಟಿ, ಚಂದ್ರ, ಅಜಿತ್ ಪಾಟೀಲ್, ಯೋಗೀಶ್, ಜಗದೀಶ್, ರೋಹಿಣಿ, ಲೋಲಾಕ್ಷಿ, ಕವಿತಾ, ಲಕ್ಷ್ಮಿ ನಾರಾಯಣ, ಯಾದವ ಗಾಣದಬೆಟ್ಟು, ಗಂಗಾಧರ್, ಸೀತಾರಾಮ್, ಕಮಲಾಕ್ಷ, ಶೋಭಾ ಪಲ್ಲಕೆರೆ, ಯಮುನಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು