8:48 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Mangaluru | ಕೊಂಕಣಿ ಕಾದಂಬರಿ ಸ್ಪರ್ಧೆ: ದ್ವಿತೀಯ ಸ್ಥಾನ ಪಡೆದ ವಿನ್ಸೆಂಟ್ ಪಿಂಟೊ ಅವರಿಗೆ ಬಹುಮಾನ ವಿತರಣೆ

20/10/2025, 15:46

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ನಡೆಸಿದ ಕೊಂಕಣಿ ಕಾದಂಬರಿ ಸ್ಪರ್ಧೆಯಲ್ಲಿ ವಿನ್ಸೆಂಟ್ ಪಿಂಟೊ ಅವರ ಕುದ್ರ್ಯಾಚೊ ರಾಕ್ವಲಿ ಕಾದಂಬರಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಪ್ರೊ. ವಲೇರಿಯನ್ ರೊಡ್ರಿಗಸ್ ಅವರು ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ದಾಯಿಜಿ ವರ್ಲ್ಡ್ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಬಜ್ಜೋಡಿ ಇನ್ಫೆಂಟ್ ಮೇರಿ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಡೊಮಿನಿಕ್ ವಾಸ್ ಅವರು ಉಪಸ್ಥಿತರಿದ್ದರು. ವಿನ್ಸೆಂಟ್ ಪಿಂಟೊ ಅವರು ಬಜ್ಜೋಡಿ ಇನ್ಫೆಂಟ್ ಮೇರಿ ಚರ್ಚ್ ನ ಸದಸ್ಯರು ಹಾಗೂ ಅವಿಲಾ ವಾರ್ಡಿನ ಮುಖ್ಯಸ್ಥರಾಗಿದ್ದು, ಕೊಂಕಣಿ ಕಾದಂಬರಿ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿರುವುದಕ್ಕಾಗಿ ಅವರನ್ನು ಚರ್ಚ್ ಧರ್ಮಗುರು ಮತ್ತು ಆಡಳಿತದವರು ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು