7:37 PM Tuesday21 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

20ಗಂಟೆಯೊಳಗೆ ಕಳ್ಳರನ್ನು ಬಂಧಿಸಿದ ಪೊಲೀಸರು ; ಮೂರು ಮನೆಯಿಂದ 20ಲಕ್ಷ ಮೌಲ್ಯದ ಕಳವು ಮಾಡಿದ್ದ ಖದೀಮರು ಅಂದರ್ !

21/10/2025, 19:21

ಮಂಗಳೂರು(reporterkarnataka.com): ಮಂಗಳೂರು ಲಾಲ್ ಬಾಗ್ ಹ್ಯಾಟ್ ಹಿಲ್‌ನ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ₹20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ವಿದೇಶಿ ಕರೆನ್ಸಿ ಕಳವು ಪ್ರಕರಣವನ್ನು ಉರ್ವಾ ಪೊಲೀಸರು ಕೇವಲ 20 ಗಂಟೆಗಳಲ್ಲಿ ಪತ್ತೆಹಚ್ಚಿ ಇಬ್ಬರು ಅಸ್ಸಾಂ ಮೂಲದ ಕಳ್ಳರಾದ ಅಭಿಜಿತ್ ದಾಸ್ (24) ಮತ್ತು ದೇಬಾ ದಾಸ್ (21)ರನ್ನು ಬಂಧಿಸಿದ್ದಾರೆ.

ಅ.19ರ ರಾತ್ರಿ ಕಳ್ಳರು ಮೂರು ಫ್ಲಾಟ್‌ಗಳಿಗೆ ನುಗ್ಗಿ ಚಿನ್ನಾಭರಣ, ₹5,000 ನಗದು, 3,000 ದಿರ್ಹಾಮ್ ಹಾಗೂ ಮೊಬೈಲ್‌ಫೋನ್ ಕಳವು ಮಾಡಿದ್ದರು. ರಿಯಾಜ್ ರಶೀದ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾದ ಬಳಿಕ ಪೊಲೀಸರು ಶ್ವಾನ ದಳ ಹಾಗೂ ಫಿಂಗರ್‌ಪ್ರಿಂಟ್ ತಜ್ಞರ ಸಹಾಯದಿಂದ ತನಿಖೆ ಆರಂಭಿಸಿದರು.

ಮಂಗಳೂರು ಉರ್ವಾ ಠಾಣಾ ತಂಡವು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಂಗಳೂರಿನಲ್ಲಿ ಬಂಧನ ಕಾರ್ಯಾಚರಣೆ ನಡೆಸಿ ಕಳವು ಮಾಡಿದ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದಿದೆ. ಆರೋಪಿಗಳಲ್ಲಿ ಒಬ್ಬನಾದ ಅಭಿಜಿತ್ ದಾಸ್ ವಿರುದ್ಧ ಹಿಂದೆಯೂ ಬೆಂಗಳೂರು ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯನ್ನು ಡಿ.ಸಿ.ಪಿ. (ಕ್ರೈಂ) ಅವರ ಮೇಲ್ವಿಚಾರಣೆಯಲ್ಲಿ ಉರ್ವಾ ಠಾಣಾ ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು